Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

‘ಕಾಂತಾರ’ ಅಬ್ಬರ: ಎರಡು ದಿನದಲ್ಲಿ 100 ಕೋಟಿ ಬಾಚಿದ ಚಿತ್ರ

ಬೆಂಗಳೂರು:

ದಸರಾ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ: ಚಾಪ್ಟರ್ 1’ ಚಿತ್ರ ಪ್ರೇಕ್ಷಕರಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಕೇವಲ ಎರಡು ದಿನಗಳಲ್ಲೇ 100 ಕೋಟಿ ರೂಪಾಯಿಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿರುವ ಈ ಸಿನಿಮಾ, ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲು ನಿರ್ಮಿಸಿದೆ.

ಚಿತ್ರ ಅಕ್ಟೋಬರ್ 2ರಂದು ಬಿಡುಗಡೆಯಾದ ಮೊದಲ ದಿನವೇ 62 ಕೋಟಿ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ ಚಿತ್ರ ಇನ್ನಷ್ಟು ಪ್ರೇಕ್ಷಕರನ್ನು ಸೆಳೆಯಿತು ಮತ್ತು ಶುಕ್ರವಾರ ಒಂದೇ ದಿನ 43.65 ಕೋಟಿ ರೂಪಾಯಿ ಕಲೆಕ್ಷನ್ ದಾಖಲಿಸಿತು. ಇದರಿಂದ ಎರಡು ದಿನಗಳಲ್ಲಿ ಒಟ್ಟು 105.5 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ‘ಕೆಜಿಎಫ್ 2’ ನಂತರ ಕೇವಲ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಅಪರೂಪದ ಕನ್ನಡ ಸಿನಿಮಾ ಎಂದರೆ ಇದು.

ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಹಾಗೂ ಜಯರಾಮ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಭಾರೀ ನಿರೀಕ್ಷೆಯ ನಡುವೆ ಬಿಡುಗಡೆಯಾದ ಸಿನಿಮಾ ಪ್ರೇಕ್ಷಕರ ಮನಸೂರೆಗೊಂಡಿದೆ.

‘ಕಾಂತಾರ: ಚಾಪ್ಟರ್ 1’ ಎರಡು ದಿನಗಳಲ್ಲೇ ಸಾಧಿಸಿದ ಈ ಅಬ್ಬರ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ತಜ್ಞರ ಅಂದಾಜು ಪ್ರಕಾರ ಈ ಸಿನಿಮಾ 300 ಕೋಟಿ ರೂಪಾಯಿ ಕ್ಲಬ್ ಸೇರಲು ಹೆಚ್ಚಿನ ಕಾಲ ಬೇಕಿಲ್ಲ. ಹೀಗಾಗಿ ಕನ್ನಡ ಸಿನಿರಂಗದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಈ ಚಿತ್ರ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಬಹುದು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು