Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ನಿಗೂಢ ಸಾವು

ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಮೃಗಾಲಯದಲ್ಲಿ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಒಂದೇ ದಿನ 20 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿವೆ. ಮೃಗಾಲಯದ ವೈದ್ಯರು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಭೂತರಾಮನಹಟ್ಟಿಯಲ್ಲಿರುವ
ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳೊಳಗೆ 28 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಘಟನೆ ಮೃಗಾಲಯ ಆಡಳಿತ ಸೇರಿದಂತೆ ಅರಣ್ಯ ಇಲಾಖೆಯಲ್ಲೂ ಆತಂಕ ಸೃಷ್ಟಿಸಿದೆ. ಈ ಘಟನೆಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವಿಶೇಷ ತನಿಖೆಗೆ ಆದೇಶ ನೀಡಿದ್ದಾರೆ.

ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಜಿಂಕೆಗಳು ಸಾಂಕ್ರಾಮಿಕ
ರೋಗದಿಂದ ಸಾವನ್ನಪ್ಪಿರುವ ಸಾಧ್ಯತೆ ಹೆಚ್ಚು. ಸೋಂಕು ನೀರಿನ ಮೂಲಕವೋ, ಅಥವಾ ಆಹಾರದ ಮೂಲಕವೋ, ಅಥವಾ ಮೃಗಾಲಯದ ಸುತ್ತಮುತ್ತಲೆ ಇರುವ ಬೆಕ್ಕುಮರಿಗಳು/ಇತರೆ ಸಾಕುಪ್ರಾಣಿಗಳ ಮೂಲಕವೋ ಹರಡಿದಿರುವುದನ್ನು ಶಂಕಿಸಲಾಗಿದೆ. ಮೃಗಾಲಯದಲ್ಲಿ ಇನ್ನೂ ಇರುವ ಪ್ರಾಣಿಗಳಿಗೆ ಸೋಂಕು ತಗುಲದಂತೆ ಕಠಿಣ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಸಚಿವ ಖಂಡ್ರೆ ಅವರು ತಕ್ಷಣವೇ ಪಶುವೈದ್ಯರು, ಅರಣ್ಯ ತಜ್ಞರು ಹಾಗೂ ವನ್ಯಜೀವಿ ಆರೋಗ್ಯ ವಿಭಾಗದ ಅಧಿಕಾರಿಗಳು ಇವರನ್ನೊಳಗೊಂಡ ವಿಶೇಷ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ.

ಈ ಸಮಿತಿ, ಜಿಂಕೆಗಳ ಸಾವಿನ ಕಾರಣ, ಮೃಗಾಲಯದ ನೀರಿನ ಗುಣಮಟ್ಟ, ಆಹಾರದ ಗುಣಮಟ್ಟ, ಸಿಬ್ಬಂದಿಯ ಅಲಕ್ಷ್ಯ ಉಂಟಾಗಿದೆಯೇ? ಎಂಬುದರ ಬಗ್ಗೆ ಸಂಪೂರ್ಣ ವರದಿ ನೀಡಲಿದೆ.

ಗುರುವಾರ 8 ಕೃಷ್ಣಮೃಗ ಮೃತಪಟ್ಟಿದ್ದವು. ಶನಿವಾರ 20 ಮೃತಪಟ್ಟಿವೆ. 38 ಕೃಷ್ಣಮೃಗ ಇದ್ದವು. 4ರಿಂದ 6 ವರ್ಷ ವಯಸ್ಸಿನ ಪ್ರಾಣಿಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇದ್ದು, ತನಿಖೆ ಮಾಡುತ್ತಿದ್ದೇವೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಸುದ್ದಿಗಾರರಿಗೆ ತಿಳಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು