Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

Major update ಸಿಎಂ ಸಂಧಾನ ಯಶಸ್ವಿ

ಬೆಂಗಳೂರು : ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಿದ್ದರಾಮಯ್ಯ ಅವರ ಸಂಧಾನ ಯಶಸ್ವಿಯಾಗಿದೆ. ಮುಷ್ಕರ ವಾಪಸ್ ಪಡೆಯಲು ಅಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.

ಮಾಸಿಕ ₹15,000 ಗೌರವಧನ ಮತ್ತು ಇತರ ಸವಲತ್ತುಗಳಿಗಾಗಿ ಆಗ್ರಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ಪ್ರತಿನಿಧಿಗಳ ಜತೆಗೆ ಶುಕ್ರವಾರ ಬೆಳಿಗ್ಗೆ ನಡೆದ ಮತ್ತೊಂದು ಮಾತುಕತೆಯೂ ಮುರಿದುಬಿದ್ದಿತ್ತು. ಮುಖ್ಯಮಂತ್ರಿಯ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದ ಧರಣಿ ನಿರತರು, ಸಂಕ್ರಾಂತಿಯನ್ನೂ ಇಲ್ಲೇ ಆಚರಿಸುವುದಾಗಿ ಪಣ ತೊಟ್ಟಿದ್ದರು.

ಮಂಗಳವಾರದಿಂದ ಆರಂಭವಾಗಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಯು ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿರಿಸಿತ್ತು. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ಪ್ರತಿಭಟನಾ ನಿರತರ ಪ್ರತಿನಿಧಿಗಳ ಜತೆಗೆ ಶುಕ್ರವಾರ ಬೆಳಿಗ್ಗೆಯೇ ಸಭೆ ನಡೆಸಿದ್ದರು. ಆದರೆ ಬೇಡಿಕೆ ಈಡೇರಿಕೆ ಸಂಬಂಧ ಒಮ್ಮತಕ್ಕೆ ಬರಲು ಆಗದೇ ಇದ್ದ ಕಾರಣಕ್ಕೆ ಮಾತುಕತೆ ಮುರಿದುಬಿದ್ದಿತ್ತು.

ಬುಧವಾರ ಮತ್ತು ಗುರುವಾರ ನಡೆದ ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಕ್ಕಿಂತ ಭಿನ್ನವಾದ ನಿಲುವನ್ನು ಅಧಿಕಾರಿಗಳು ಪ್ರದರ್ಶಿಸಿದ್ದರು. ಆಶಾ ಕಾರ್ಯಕರ್ತೆಯರ ಅವಶ್ಯಕತೆಯೇ ಇಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿಯೇ ಎಲ್ಲವನ್ನೂ ನಿಭಾಯಿಸುತ್ತಾರೆ ಎಂಬ ಅಭಿಪ್ರಾಯ ಸರ್ಕಾರದ ಕಡೆಯಿಂದ ವ್ಯಕ್ತವಾಗಿತ್ತು. ಕೊನೆಗೂ ಆಶಾ ಕಾರ್ಯಕರ್ತೆಯರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ