Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಂಪತಿ ಕನಿಷ್ಠ 3 ಮಕ್ಕಳ ಹೆರಬೇಕು: ಮೋಹನ ಭಾಗವತ

ನಾಗ್ಪುರ : ಜನಸಂಖ್ಯೆ ಬೆಳವಣಿಗೆ ದರವು 2.1ಕ್ಕಿಂತ ಕಡಿಮೆಯಾದರೆ, ಸಮಾಜವು ನಾಶವಾಗುತ್ತದೆ ಎಂದು ಭಾನುವಾರ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರತಿ ದಂಪತಿ ಕನಿಷ್ಠ 3 ಮಕ್ಕಳ ಹೆರಬೇಕು ಎಂದು ಕರೆ ನೀಡಿದ್ದಾರೆ. ಇಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು, ಪ್ರತಿ ಕುಟುಂಬವೂ ಒಂದು ಘಟಕವಾಗಿದ್ದು, ಪ್ರತೀ ಕುಟುಂಬವು ಸಮಾಜದ ಒಂದು ಭಾಗ ಎಂದು ಕುಟುಂಬದ ಮಹತ್ವವನ್ನು ಒತ್ತಿ ಹೇಳಿದರು.

ಸಮಾಜವು ಬದುಕಬೇಕೆಂದರೆ ನಾವು 2ಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯಬೇಕು, ಅಂದರೆ ಕನಿಷ್ಠ ಮೂರು ಜನ ಮಕ್ಕಳನ್ನು ಪಡೆಯಬೇಕು ಎಂದು ಜನಸಂಖ್ಯಾ ವಿಜ್ಞಾನ ಹೇಳುತ್ತದೆ. ಜನಸಂಖ್ಯಾ ಬೆಳವಣಿಗೆ ದರ 2.1ಕ್ಕಿಂತ ಕಡಿಮೆ ಆದರೆ ಸಮಾಜ ನಾಶವಾಗುತ್ತದೆ ಎಂದರು. ಇತ್ತೀಚೆಗೆ ಟಿಡಿಪಿ ನಾಯಕ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ದಕ್ಷಿಣ ಭಾರತದಲ್ಲಿ ಜನಸಂಖ್ಯಾ ಬೆಳವಣಿಗೆ ದರ 2.1ಕ್ಕಿಂತ ಕುಂಠಿತ ಆಗಿದೆ. ಇದು ಭವಿಷ್ಯದಲ್ಲಿ ಜನಸಂಖ್ಯಾ ಸಮತೋಲನದ ಮೇಲೆ ಪರಿಣಾಮ ಬೀರಲಿದೆ ಎಂದಿದ್ದರು.

ಭಾರತದ ಒಟ್ಟು ಫಲವತ್ತತೆ ದರ (ಟಿಎಫ್‌ಆರ್‌) ಅಥವಾ ಮಹಿಳೆಯು ತನ್ನ ಜೀವಿತಾವಧಿಯಲ್ಲಿ ಜನ್ಮ ನೀಡುವ ಮಕ್ಕಳ ಸರಾಸರಿ ಸಂಖ್ಯೆಯು 2.2 ರಿಂದ 2 ಕ್ಕೆ ಇಳಿದಿದೆ ಎಂದು 2021 ರಲ್ಲಿ ಬಿಡುಗಡೆಯಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ದತ್ತಾಂಶ ಹೇಳಿತ್ತು.

ಒವೈಸಿ ವ್ಯಂಗ್ಯ:
ಪ್ರಧಾನಿ ನರೇಂದ್ರ ಮೋದಿ ಅವರು, ‘ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದು ಲೋಕಸಭೆ ಚುನಾವಣೆ ವೇಳೆ ಕಿಡಿಕಾರಿದ್ದರು. ಈಗ ಭಾಗವತ್‌ 3 ಮಕ್ಕಳ ಹೆರಿ ಎನ್ನುತ್ತಿದ್ದಾರೆ. ಹೀಗಾಗಿ ಆರೆಸ್ಸೆಸ್‌ನವರು ಇನ್ನು ಮದುವೆ ಆಗಲು ಆರಂಭಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ವ್ಯಂಗ್ಯವಾಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು