Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಪತ್ರಿಕಾ ರಂಗಕ್ಕೆ ಅಪಾರ ಹಾನಿ : ಪ್ರಕಟಣೆ ನಿಲ್ಲಿಸಿತು ಕನ್ನಡ ವಾರಪತ್ರಿಕೆ

 

‌ಬೆಂಗಳೂರು :
ಕನ್ನಡ ಓದುಗರ ಮನೆಮಾತಾಗಿದ್ದ ‘ಮಂಗಳ’ ವಾರ ಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಲಿದೆ ಎಂದು ವರದಿಯಾಗಿದೆ.

ಕನ್ನಡ ಪತ್ರಿಕಾರಂಗದಲ್ಲಿ ಅನೇಕ ದಶಕಗಳಿಂದ ಗುರುತಿಸಿಕೊಂಡಿದ್ದ ಮಂಗಳ ವಾರಪತ್ರಿಕೆ ಇನ್ನುಮುಂದೆ ಪ್ರಕಟವಾಗುವುದಿಲ್ಲ.
ಈ ಕುರಿತು ಮಂಗಳ ವಾರ ಪತ್ರಿಕೆ ಸಂಪಾದಕರು ಪ್ರಕಟಣೆ ನೀಡಿದ್ದು, ಈ ವಾರ ಮಂಗಳ ವಾರಪತ್ರಿಕೆಯ ಕೊನೆಯ ಸಂಚಿಕೆ ಮುದ್ರಣಗೊಂಡಿದೆ ಎಂದು ತಿಳಿಸಿದ್ದಾರೆ.

ಸರಿ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪತ್ರಿಕೆ ತನ್ನ ಯಾನ ನಿಲ್ಲಿಸಿರುವುದರಿಂದಾಗಿ ಅನೇಕ ಓದುಗರ ನಿರಾಸೆಗೊಂಡಿದ್ದಾರೆ.
ಕೊರೊನಾ ಹೊಡೆತ, ಡಿಜಿಟಲ್ ಮಾಧ್ಯಮಗಳು ವೇಗ ಪಡೆದುಕೊಂಡ ನಂತರವೂ. ಮೂರು ವರ್ಷಗಳ ಕಾಲ ಮಂಗಳ ವಾರಪತ್ರಿಕೆ ಮುನ್ನಡೆಸಿದ್ದೇವೆ.ಇದೀಗ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಳ್ಳಲಿದೆ ಎಂದು ತಿಳಿಸಲಾಗಿದೆ.
ಮಂಗಳ ಪತ್ರಿಕೆ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿತ್ತು. ಆರಂಭಿಕ ಸಂಪಾದಕರಾದ ಬಾಬು ಕೃಷ್ಣಮೂರ್ತಿಯವರು ಓದುಗರ ನಾಡಿಮಿಡಿತವನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಅದಕ್ಕೆ ತಕ್ಕಂತೆ ವಾರಪತ್ರಿಕೆಯನ್ನು ರೂಪಿಸಿದ್ದರು. ಗ್ರಾಮೀಣ ಭಾಗದಲ್ಲಿ ಪತ್ರಿಕೆಯ ಓದು ಅಗಾಧವಾಗಿತ್ತು. ಮಕ್ಕಳಿಗಾಗಿ ಇದ್ದ ಬಾಲಮಂಗಳ ಬಹಳ ಜನಪ್ರಿಯವಾಗಿತ್ತು. ಹೆಚ್ಚಾಗಿ ಮಧ್ಯಮ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಪತ್ರಿಕೆ ರೂಪುಗೊಳ್ಳುತ್ತಿತ್ತು. ಅನೇಕ ಬರಹಗಾರರಿಗೆ ಇದು ಮೊದಲ ಮೆಟ್ಟಿಲಾದ ಪತ್ರಿಕೆಯಾಗಿದೆ.‌ ಬದಲಾದ ಕಾಲಘಟ್ಟದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?