Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಗದೊಮ್ಮೆ ಪಕ್ಷಾಂತರ : ಸಿಎಂ ಭೇಟಿಯಾಗಿ ಆಶೀರ್ವಾದ ಪಡೆದ ಸೈನಿಕ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ಯೋಗೇಶ್ವರ ಅವರು ಈ ಹಿಂದೆ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಜೆಡಿಎಸ್ ನಲ್ಲಿ ರಾಜಕೀಯ ಜೀವನ ನಡೆಸಿದ್ದರು. ಇದೀಗ ಮಗದೊಮ್ಮೆ ಕಾಂಗ್ರೆಸ್ ಸೇರ್ಪಡೆ ಹಾದಿಯನ್ನು ಸ್ಪಷ್ಟಪಡಿಸಿದ್ದಾರೆ.

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್​ಆಯಪ್​ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸದಾಶಿವ ನಗರದ ಉಪಮುಖ್ಯಮಂತ್ರಿ ಡಿ.ಕೆ.. ಶಿವಕುಮಾರ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ ಪ್ರಮುಖರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಸಂಸದ ಡಿ.ಕೆ. ಸುರೇಶ​, ಸಚಿವ ಜಮೀರ್​ ಅಹ್ಮದ್​, ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊದಲಾದವರು ಇದ್ದರು. ಈ ಬೆಳವಣಿಗೆಯಿಂದ ಯೋಗೇಶ್ವರ ಅವರು ಚನ್ನಪಟ್ಟಣದ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತವಾದಂತಾಗಿದೆ.
ಈಗಾಗಲೇ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಯೋಗೇಶ್ವರ ಅವರು ಬಿಜೆಪಿ ಪ್ರಾಥಮಿಕ ಸದಸ್ಯತವಕ್ಕೂ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ಸೇರ್ಪಡೆ ಎಂಬುದು ಈಗ ಕೇವಲ ಔಪಚಾರಿಕವಾಗಿ ಉಳಿದಿದೆಯಷ್ಟೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?