Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ

ಬೆಳಗಾವಿ : ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆಯ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕವಾಗಿ ಹಲ್ಲೆ ಮಾಡಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇದರ ವಿಡಿಯೋ ಈಗ ಮೊಬೈಲ್ ಫೋನಿನಲ್ಲಿ ಸೆರೆಯಾಗಿದೆ. ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯ ವಡ್ಡರವಾಡಿಯ ಮನೆಯಲ್ಲಿ ಬಾಲಕಿಯೊಬ್ಬಳ ಜೊತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಪಕ್ಕದಲ್ಲಿ ವಾಸವಾಗಿರುವ ಮತ್ತೊಂದು ಕುಟುಂಬದವರು ಮಹಿಳೆ ಮೇಲೆ ವೇಶ್ಯಾವಾಟಿಕೆ ಆರೋಪ ಮಾಡಿದ್ದಾರೆ. ಮನೆಗೆ ನುಗ್ಗಿ ತಾಯಿ ಮತ್ತು ಮಗಳನ್ನು ಹೊರಗೆ ಎಳೆದು ಹಲ್ಲೆ ಮಾಡಿದ್ದಾರೆ. ಸಂಬಂಧ ಇಲ್ಲದವರೆಲ್ಲ ಆ ಮಹಿಳೆಯ ಮನೆಗೆ ಬಂದು ಹೋಗುತ್ತಾರೆ. ಅವರು ವೇಶ್ಯಾವಾಟಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ನೆರೆಮನೆಯವರು ತಾಯಿ ಮಗಳನ್ನು ಮನೆ ಬಿಡಿಸಲು ಇದೇ ಕಾರಣ ಎಂದು ಹೇಳಿದ್ದಾರೆ. ಇದರ ಜಗಳ ವಿಕೋಪಕ್ಕೆ ತಿರುಗಿದ ನಂತರ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಿದ್ದಾರೆ. ಈಗ ಈ ಘಟನೆಯ ದೃಶ್ಯ ಮೊಬೈಲ್ ಫೋನ್ ನಲ್ಲಿ ರೆಕಾರ್ಡ್ ಆಗಿದೆ. ಹಲ್ಲೆಗೊಳಗಾಗಿರುವ ಮಹಿಳೆ ಮಾಳ ಮಾರುತಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ಮೊದಲಿಗೆ ದೂರು ದಾಖಲು ಮಾಡಲು ವಿಳಂಬ ಮಾಡಿದ್ದರು. ಕೊನೆಗೆ ಮಹಿಳೆ ತಮಗೆ ಜೀವ ಭಯ ಇದೆ ರಕ್ಷಣೆ ಕೊಡಿ ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಂತರ ಇದೀಗ ಮೂವರ ವಿರುದ್ಧ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಸೆಕ್ಷನ್ 115 (2),3(5), 331,352 ಮತ್ತು 74 ರಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕೊನೆಗೂ ತನಿಖೆ ಆರಂಭಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?