Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಕ್ಕಮಹಾದೇವಿ ಮಹಿಳಾ ವಿವಿ: ನೂತನ ಕುಲಪತಿ ​

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 6ನೇ ಕುಲಪತಿಯಾಗಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ನೇಮಕ ಮಾಡಿ, ರಾಜ್ಯಪಾಲ ಥಾವರಚಂದ ಗೆಹಲೋಟ್ ಗುರುವಾರ ಆದೇಶ ಹೊರಡಿಸಿದ್ದಾರೆ.

ಇಲ್ಲಿಯ ವರೆಗೆ ಹೊರಗಿನ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಕುಲಪತಿಗಳಾಗಿ ನೇಮಕಗೊಂಡಿದ್ದರು. ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪ್ರಾಧ್ಯಾಪಕರಿಗೆ ಕುಲಪತಿ ಹುದ್ದೆ ಒಲಿದು ಬಂದಿದೆ.

ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ನೂತನ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಗುರುವಾರ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು.

ಹಂಗಾಮಿ ಕುಲಪತಿಯಾಗಿದ್ದ ಪ್ರೊ.ನಾಮದೇವಗೌಡ, ಕುಲಸಚಿವ ಶಂಕರಗೌಡ ಸೋಮನಾಳ, ಸಿಂಡಿಕೇಟ್ ಸದಸ್ಯರಾದ ಶಿವಯೋಗಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ ಉಪಸ್ಥಿತರಿದ್ದರು.

 

ಪರಿಚಯ:
ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಪ್ರಾಧ್ಯಾಕರಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಈ ಹಿಂದೆ ಮಹಿಳಾ ವಿವಿಯ ಹಣಕಾಸು ಅಧಿಕಾರಿಗಳಾಗಿ, ಸಮಾಜ ವಿಜ್ಞಾನ ನಿಕಾಯದ ಡೀನ್‌ ಆಗಿ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಪಿಎಂಇಬಿ ನಿರ್ದೇಶಕರಾಗಿ, ಸಿಡಿಸಿ ನಿರ್ದೇಶಕರಾಗಿ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

ಪ್ರೊ.ವಿಜಯಾ ಕೋರಿಶೆಟ್ಟಿ ಅವರು 50ಕ್ಕೂ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಕಾರ್ಯಾಗಾರ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಏಳು ಪುಸ್ತಕಗಳು ಮತ್ತು 55 ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇಲ್ಲಿಯ ವರೆಗೆ 16 ವಿದ್ಯಾರ್ಥಿನಿಯರು ಇವರ ಮಾರ್ಗದರ್ಶನದಲ್ಲಿ ಪಿಎಚ್‍.ಡಿ ಪದವಿ ಪಡೆದುಕೊಂಡಿದ್ದಾರೆ. ನಾಲ್ಕು ಸಂಶೋಧನಾ ಪ್ರೊಜೆಕ್ಟ್‌ಗಳನ್ನು ಪೂರ್ಣಗೊಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?