Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಚ್ಚತೀವು ದ್ವೀಪದ ಕುರಿತು ಸಂಚಲನಕ್ಕೆ ಕಾರಣವಾಯ್ತು ಅಣ್ಣಾಮಲೈ ಹೇಳಿಕೆ

ಚೆನ್ನೈ : ಲೋಕಸಭಾ ಚುನಾವಣೆ ಕಣ ರಂಗೇರಿದೆ. ಇದರ ನಡುವೆ ಕಚ್ಚತೀವು ದ್ವೀಪ ವಿವಾದ ಭುಗಿಲೆದ್ದಿದೆ. ಈ ದ್ವೀಪವನ್ನು 1974ರಲ್ಲಿ ಇಂದಿರಾ ಗಾಂಧಿ ಶ್ರೀಲಂಕಾಗೆ ಅಧಿಕೃತವಾಗಿ ನೀಡಿದ್ದಾರೆ. ಈ ಮಾಹಿತಿ ಆರ್‌ಟಿಐನಡಿ ಬಹಿರಂಗವಾಗಿದೆ.

ಅಣ್ಣಾಮಲೈ, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ದ ಮುಗಿಬಿದ್ದಿದ್ದಾರೆ. ಇತ್ತ ಕಾಂಗ್ರೆಸ್ ಮೋದಿ ಸರ್ಕಾರದಲ್ಲಿ ನಡೆದಿರುವ ಭಾರತ-ಬಾಂಗ್ಲಾದೇಶ ಒಪ್ಪಂದವನ್ನು ಕದೆಕಿದ್ದಾರೆ. ಹೀಗಾಗಿ ಕಚ್ಚತೀವು ಭಾರಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನೀಡಿದ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. ಈ ದ್ವೀಪವನ್ನು ಶ್ರೀಲಂಕಾದಿಂದ ಮರಳಿ ಪಡೆಯಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಅಂದಿನ ಕಾಂಗ್ರೆಸ್ ಸರ್ಕಾರ, ಭಾರತದ ದ್ವೀಪವನ್ನು ಶ್ರೀಲಂಕಾಗೆ ನೀಡಲು ಅತೀವ ಉತ್ಸುಕವಾಗಿತ್ತು. ಪ್ರಧಾನಿ ಇಂದಿರಾ ಗಾಂಧಿ ಈ ದ್ವೀಪವನ್ನು ಅಂದಿನ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಮಾತುಕತೆ ನಡೆಸಿ ಶ್ರೀಲಂಕಾಗೆ ನೀಡಿದ್ದರು. ಕಚ್ಚತೀವು ದ್ವೀಪ ತಮಿಳುನಾಡು ಮೀನುಗಾರರಿಗೆ ಎಷ್ಟು ಮುಖ್ಯ ಅನ್ನೋದು ಕರುಣಾನಿಧಿಗೆ ತಿಳಿದಿತ್ತು. ಆದರೆ ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿದು, ದೇಶದ ಹಿತಾಸಕ್ತಿಗೆ ಧಕ್ಕೆ ತಂದಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಕಚ್ಚತೀವು ದ್ಪೀಪವನ್ನು ಶ್ರೀಲಂಕಾದಿಂದ ಮರಳಿ ಪಡೆಯುವತೆ ಬಿಜೆಪಿ ವಿದೇಶಾಂಗ ಸಚಿವೆ ಎಸ್ ಜೈಶಂಕರ್‌ಗೆ ಮನವಿ ನೀಡಿದೆ. ಕೇಂದ್ರ ಮೋದಿ ಸರ್ಕಾರ ಈ ದ್ವೀಪವನ್ನು ಮರಳಿ ಪಡೆಯಲು ಪ್ರಯತ್ನ ನಡೆಸುತ್ತಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಕಚ್ಚತೀವು ಕುರಿತು ಟ್ವೀಟ್ ಮೂಲಕ ಆಕ್ರೋಶಹೊರಹಾಕಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್‌ ಎಷ್ಟು ಕಠೋರ ಮನಸ್ಸಿನಿಂದ ಭಾರತದ ಭೂಭಾಗವನ್ನು ಮತ್ತೊಂದು ದೇಶಕ್ಕೆ ಬಿಟ್ಟುಕೊಟ್ಟಿದೆ ಎಂಬುದನ್ನು ಈ ಪ್ರಕರಣ ಬಯಲು ಮಾಡಿದೆ. ಆ ಪಕ್ಷ ಭಾರತವನ್ನು ರಕ್ಷಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಕಚ್ಚತೀವು ದ್ವೀಪ ಉಳಿಸಿಕೊಳ್ಳಲು ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಆಸಕ್ತಿ ಇರಲಿಲ್ಲ. ತಮ್ಮ ಹಿತಾಸಕ್ತಿಯೇ ಮುಖ್ಯವಾಗಿತ್ತು. 1960ರಲ್ಲಿ ಲೋಕಸಭೆಯಲ್ಲಿ ಜವಾಹರ್‌ಲಾಲ್ ನೆಹರೂ ಇದೇ ಕಚ್ಚತೀವು ಕುರಿತು ಉತ್ತರ ನೀಡಿದ್ದರು. ‘ಕಚತೀವು ಎಂಬಂತಹ ಸಣ್ಣ ದ್ವೀಪದ ಕುರಿತು ತಕರಾರು ತೆಗೆಯಲು ನಮಗೆ ಆಸಕ್ತಿ ಇಲ್ಲ. ಭಾರತವು ಆ ಪ್ರದೇಶದ ಮೇಲೆ ಹಕ್ಕು ಸಾಧಿಸುವುದನ್ನು ಕೈಬಿಡುತ್ತದೆ’ ಎಂದು ಘೋಷಿಸಿದರು. 1968ರಲ್ಲಿ ಪ್ರಧಾನಿ ಇಂದಿರಾ ಗಾಂಧಿ ಕಚ್ಚತೀವು ದ್ವೀಪ ಶ್ರೀಲಂಕಾಗೆ ನೀಡಲು ಕಾನೂನು ಪ್ರಕ್ರಿಯೆ ಆರಂಭಿಸಿ 1974ರಲ್ಲಿ ಲಂಕಾಗೆ ನೀಡಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ