Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಲೆಗಳಿಗೆ ದಸರಾ ರಜೆ ಘೋಷಣೆ

ಬೆಂಗಳೂರು : ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ, ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರ ತನಕ ದಸರಾ ರಜೆ ಘೋಷಿಸಿದೆ. ಈ ಮೊದಲು ದಸರಾ ರಜೆ ವಿಳಂಬ ಆಗುತ್ತಿದ್ದರಿಂದ ರಾಜ್ಯದ ಕೆಲವು ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಮಾಡಿಲ್ಲ. ವಿಶೇಷವಾಗಿ ಈ ವರ್ಷದ ಮಳೆಗಾಲದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ಸೇರಿದಂತೆ ಹೆಚ್ಚಿನ ಜಿಲ್ಲೆಗಳಿಗೆ ಮಳೆಯ ಬಿಸಿ ತಟ್ಟಿತ್ತು. ವಾರವಿಡೀ ಶಾಲೆಗಳಿಗೆ ರಜೆ ಸಾರಲಾಗಿತ್ತು. ಆದರೆ ಶನಿವಾರ ಸೇರಿದಂತೆ ಇತರ ರಜಾ ದಿನಗಳಲ್ಲಿ ಶಾಲೆಯನ್ನು ನಡೆಸಲಾಗಿತ್ತು. ಇದೀಗ ಶಾಲೆಗಳಿಗೆ ಮಧ್ಯಂತರ ದಸರಾ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಎಲ್ಲಾ ಶಾಲೆಗಳು 2024ರ ಶೈಕ್ಷಣಿಕ ವರ್ಷವು ಮೇ 29 ರಿಂದ ಪ್ರಾರಂಭವಾಗಿತ್ತು. ಮೊದಲ ಅವಧಿ ಅಕ್ಟೋಬ‌ರ್ 2ರ ತನಕ ಇರುತ್ತದೆ. ಸೆಪ್ಟೆಂಬರ್ 23 ರಿಂದ ಮಧ್ಯಂತರ ಪರೀಕ್ಷೆ ಆರಂಭವಾಗಿ ತಿಂಗಳ ಕೊನೆಯ ವರೆಗೆ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಶುರುವಾಗಲಿದೆ. ಅಕ್ಟೋಬರ್ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ರಜೆ ಇರಲಿದೆ.

ಅಕ್ಟೋಬ‌ರ್ 3ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿ ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿವೆ. 2024-2025 ರ ಶೈಕ್ಷಣಿಕ ವರ್ಷದ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ಘೋಷಣೆಯಾಗಿವೆ.

ಇದು ಜನಜೀವಾಳದ ಕಳಕಳಿ :

ಶಿಕ್ಷಕರು ದಸರಾ ರಜೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅದರಲ್ಲೂ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ರಜೆಯಲ್ಲಿ ಕಾರ್ಯ ಯೋಜನೆ ರೂಪಿಸಬೇಕು. ಈ ಮೂಲಕ ಮಕ್ಕಳ ಭವಿಷ್ಯ ಉತ್ತುಂಗಕ್ಕೇರಲು ತಮ್ಮ ತ್ಯಾಗ-ಕೊಡುಗೆಯನ್ನು ಧಾರೆ ಎರೆಯಬೇಕು. ವಿದ್ಯಾರ್ಥಿಗಳು ಸಹ ಮಧ್ಯಂತರ ದಸರಾ ರಜೆಯನ್ನು ಪಠ್ಯೇತರ ಚಟುವಟಿಕೆ ಜೊತೆ ಸಮಯ ಸಿಕ್ಕಾಗಲೆಲ್ಲ ಓದಿನಲ್ಲಿ ತೊಡಗಿಸಿ ಭವಿಷ್ಯದ ಸ್ಪರ್ಧಾತ್ಮಕ ಜೀವನವನ್ನು ಯಶಸ್ವಿಯಾಗಿಸಲು ಸಂಕಲ್ಪ ತೊಡಬೇಕು. ಈ ಮೂಲಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ದಸರಾ ರಜೆಯನ್ನು ಸಾರ್ಥಕಪಡಿಸಿಕೊಳ್ಳಬೇಕು ಎನ್ನುವುದು ಜನಜೀವಾಳದ ಕಳಕಳಿ ಹಾಗೂ ಆಶಯವಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?