Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಕಿರುತೆರೆ ನಟಿಗೆ ಅಶ್ಲೀಲ ವೀಡಿಯೊ ಕಳುಹಿಸಿ ಕಿರುಕುಳ ; ಆರೋಪಿ ಬಂಧನ

ಬೆಂಗಳೂರು: ಕನ್ನಡ ಹಾಗೂ ತೆಲುಗು ಧಾರವಾಹಿಗಳಲ್ಲಿ ಕೆಲಸ ಮಾಡುವ 41 ವರ್ಷದ ನಟಿಯೊಬ್ಬರು ತಮಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಪದೇ ಪದೇ ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸಿದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಆತ ಕಿರುಕುಳ ಮುಂದುವರೆಸಿದ್ದ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.

ತೆಲುಗು ಮತ್ತು ಕನ್ನಡ ದೂರದರ್ಶನ ಧಾರಾವಾಹಿಗಳಲ್ಲಿ ಕೆಲಸ ಮಾಡುವ ನಟಿಗೆ ಮೂರು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ‘ನವೀಂಜ್’ ಎಂಬ ಬಳಕೆದಾರರಿಂದ ಫ್ರೆಂಡ್ ರಿಕ್ವೆಸ್ಟ್ ಬಂದ ನಂತರ ಈ ಭಯಾನಕ ಅನುಭವ ಪ್ರಾರಂಭವಾಯಿತು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ‘Naveenz’ ಎಂಬ ಬಳಕೆದಾರರಿಂದ ಫ್ರೆಂಡ್‌ ರಿಕ್ವೆಸ್ಟ್‌ ಬಂದಿತ್ತು. ನಟಿ ಅದನ್ನು ಸ್ವೀಕರಿಸದಿದ್ದರೂ, ಆ ವ್ಯಕ್ತಿ ಮೆಸೆಂಜರ್ ಮೂಲಕ ಪ್ರತಿದಿನವೂ ಅಸಭ್ಯ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದ.

ನಟಿ ಆ ಬಳಕೆದಾರನನ್ನು ಬ್ಲಾಕ್ ಮಾಡಿದ ನಂತರವೂ, ಆತ ಹಲವು ಹೊಸ ಖಾತೆಗಳನ್ನು ಸೃಷ್ಟಿಸಿಕೊಂಡು ಅಶ್ಲೀಲ ಮೆಸೇಜ್‌ ಕಳುಹಿಸುವುದನ್ನು ಮುಂದುವರಿಸಿದ್ದ. ಈತ ಬೇರೆ ಬೇರೆ ಐಡಿಗಳಿಂದ ಅಶ್ಲೀಲ ಸಂದೇಶಗಳು ಮತ್ತು ತನ್ನ ಖಾಸಗಿ ಅಂಗಗಳ ವೀಡಿಯೊಗಳನ್ನು ಕೂಡ ಕಳುಹಿಸಿದ್ದ ಎಂದು ಆರೋಪಿಸಲಾಗಿದೆ.
ನವೆಂಬರ್ 1 ರಂದು, ನಟಿ ನಾಗರಭಾವಿಯ ನಂದನ್ ಪ್ಯಾಲೇಸ್ ಬಳಿ ಬೆಳಿಗ್ಗೆ 11:30 ರ ಸುಮಾರಿಗೆ ಆರೋಪಿಯನ್ನು ನೇರವಾಗಿ ಭೇಟಿಯಾಗಿ, ಈ ತರಹದ ವರ್ತನೆ ನಿಲ್ಲಿಸುವಂತೆ ಎಚ್ಚರಿಸಿದ್ದರು ಎಂದು ವರದಿಯಾಗಿದೆ. ಆದಾಗ್ಯೂ, ಶೀಘ್ರದಲ್ಲೇ ಕಿರುಕುಳ ಮತ್ತೆ ಆರಂಭವಾಯಿತು ಎಂದು ಆರೋಪಿಸಲಾಗಿದೆ. ನಂತರ ನಟಿ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು