Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ ವಿಧಾನಸಭಾ ಮತ್ತು ಲೋಕಸಭಾ ಮತಕ್ಷೇತ್ರಗಳು..!

ಬೆಳಗಾವಿ: ಇಡೀ ದೇಶದಲ್ಲಿ ನಡೆಯುತ್ತಿರುವ ಜನಗಣತಿ ನಂತರ ಲೋಕಸಭೆ ಮತ್ತು ವಿಧಾನಸಭಾ ಮತಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅದರಂತೆ ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ವಿಧಾನಸಭೆ ಮತ್ತು ಲೋಕಸಭಾ ಮತಕ್ಷೇತ್ರಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಗೋಚರಿಸಿದೆ. ಒಂದು ಮಾಹಿತಿ ಪ್ರಕಾರ ಇನ್ನೂ ಒಂದು ಲೋಕಸಭಾ ಮತಕ್ಷೇತ್ರ ಹಾಗೂ ಎಂಟು ವಿಧಾನಸಭಾ ಮತಕ್ಷೇತ್ರಗಳು ಏರಿಕೆಯಾಗಬಹುದು.


ಬೆಳಗಾವಿ ಜಿಲ್ಲೆಯಲ್ಲಿ ಭಾಷೆಯ ಕಾರಣಕ್ಕೆ ಕ್ಷೇತ್ರ ಪುನೃ ವಿಂಗಡನೆ ಅತ್ಯಂತ ಮಹತ್ವದ್ದಾಗಿದೆ. ಆ ಲೆಕ್ಕಾಚಾರದ ಮೇಲೆಯೇ ಹೆಚ್ಚಾಗಿ ಕ್ಷೇತ್ರ ಪುನರ್ವಿಂಗಡಣೆಗೆ ಆಡಳಿತ ಕೈ ಹಾಕಲಿದೆ.

ಮಹಿಳಾ ಮೀಸಲಾತಿ ಜಾರಿಯಿಂದಾಗಿ ಒಂದೆರಡು ಮಹಿಳಾ ಕ್ಷೇತ್ರಗಳು ಬರಲಿವೆ.
ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಮತಕ್ಷೇತ್ರ ಸದ್ಯ ಕೆನರಾ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಗೆ ಬರುತ್ತಿದೆ. ಭವಿಷ್ಯದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹೊಸದಾಗಿ ರೂಪುಗೊಳ್ಳುವ ಕ್ಷೇತ್ರಕ್ಕೆ ಇವೆರಡು ವಿಧಾನಸಭಾ ಮತಕ್ಷೇತ್ರಗಳು ಸೇರಬಹುದು. ಬೆಳಗಾವಿಯಲ್ಲಿ ಭಾಷಾ ವಿವಾದ ಕಾರಣಕ್ಕೆ ಮೊದಲಿನಿಂದಲೂ ಕನ್ನಡ ಭಾಷಿಕರ ಬಾಹುಳ್ಯ ಇರುವ ಕೆನರಾ ಲೋಕಸಭಾ ಮತಕ್ಷೇತ್ರಕ್ಕೆ ಸೇರಿಸಲಾಗಿತ್ತು. ಅದನ್ನು ಹೊರತುಪಡಿಸಿ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಗಳು ಸದ್ಯ ಅಸ್ತಿತ್ವದಲ್ಲಿವೆ. ಸದ್ಯದ ಮಾಹಿತಿ ಪ್ರಕಾರ ಇನ್ನೂ ಒಂದು ಲೋಕಸಭಾ ಮತಕ್ಷೇತ್ರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಮತಕ್ಷೇತ್ರಗಳಿವೆ. ಈ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ. ಅದರಲ್ಲೂ ಜಿಲ್ಲಾ ಕೇಂದ್ರವಾಗಿರುವ ಬೆಳಗಾವಿಯಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚಾಗಿದ್ದು ವಿಧಾನಸಭಾ ಕ್ಷೇತ್ರಗಳು ಸಹಜವಾಗಿ ಹೆಚ್ಚಲಿದೆ.

ಸದ್ಯ ಎಷ್ಟು ಕ್ಷೇತ್ರಗಳು ಹೆಚ್ಚಳವಾಗುತ್ತವೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಿಲ್ಲ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ನಿಖರವಾಗಲಿದೆ. ಇದರಿಂದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬೇಕು ಎಂದು ಬಯಸುವ ಆಕಾಂಕ್ಷಿಗಳಲ್ಲಿ ಇನ್ನಷ್ಟು ಹುರುಪು ಮೂಡಿದ್ದು ತಾವು ಯಾವ ಮತಕ್ಷೇತ್ರದಿಂದ ಸ್ಪರ್ಧಿಸಿದರೆ ಅನುಕೂಲ ಎಂಬ ಲೆಕ್ಕಾಚಾರವನ್ನು ಮುಂದಿನ ದಿನಗಳಲ್ಲಿ ಹಾಕಲಿದ್ದಾರೆ.

ಒಟ್ಟಾರೆ ಕ್ಷೇತ್ರ ಪುನರ್ವಿಂಗಡಣೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮತ್ತಷ್ಟು ಕ್ಷೇತ್ರಗಳ ಹೆಚ್ಚಳವಾಗಲಿದ್ದು ಈಗ ಎಲ್ಲೆಡೆ ಕ್ಷೇತ್ರ ಪುನರ್ ವಿಂಗಡನೆ ಬಗ್ಗೆ ಚರ್ಚೆ ಹರಿದಾಡಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು