Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಪ್ರಾಪ್ತೆ ಮೇಲೆ ನಡೆದ ಕ್ರೌರ್ಯತೆ ನೆನೆದು ಕಣ್ಣಿರು ಹಾಕಿದ ಅಥಣಿ ಪಿಎಸ್ಐ

ಬೆಳಗಾವಿ: 2019ರಲ್ಲಿ ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತು ಆಕೆಯ ಮೇಲೆ ನಡೆದ ಕ್ರೌರ್ಯತೆ ನೆನೆದು ಗ್ರಾಮಸ್ಥರ ಮುಂದೆ ತನಿಖಾಧಿಕಾರಿಯಾಗಿದ್ದ ಪೊಲೀಸ್​ ಇನ್ಸ್​ಪೆಕ್ಟರ್ (PSI)​​ ಗಿರಿಮಲ್ಲಪ್ಪ ಉಪ್ಪಾರ ಅವರು ಕಣ್ಣೀರು ಹಾಕಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಇತ್ತೀಚೆಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ, 10 ಲಕ್ಷ ರೂಪಾಯಿ ದಂಡ ಕಟ್ಟುವಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತ್ರಸ್ತೆಯ ಗ್ರಾಮದಲ್ಲಿ‘ಶಿಕ್ಷೆಗೆ ಸಂಭ್ರಮ, ಮಿಡಿದ ಮನಗಳ ಸಂಗಮ’ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದೇ ವೇಳೆ ಗ್ರಾಮಸ್ಥರೆಲ್ಲರೂ ರಸ್ತೆಯಲ್ಲಿ ಮೊಂಬತ್ತಿ ಹಿಡಿದು ಸಾಗುವ ಮೂಲಕ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದರು.
ಶ್ರದ್ಧಾಂಜಲಿ ಸಲ್ಲಿಸಿ, ಬಳಿಕ ವೇದಿಕೆಯಲ್ಲಿ ಮಾತನಾಡುವ ವೇಳೆ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಆರೋಪಿಯ ಕ್ರೂರತನ ನೆನೆದು ಭಾವುಕರಾಗಿ ಬಿಕ್ಕಿಬಿಕ್ಕಿ ಅತ್ತರು. ಆವತ್ತು ನಡೆದ ಘಟನೆಯ ಬಗ್ಗೆ ಗ್ರಾಮಸ್ಥರಿಗೆ ವಿವರಿಸಿದರು. ಅಂದು ಪ್ರಕರಣದ ತನಿಖಾಧಿಕಾರಿಯಾಗಿದ್ದ ಗಿರಿಮಲ್ಲಪ್ಪ ಉಪ್ಪಾರ ಸದ್ಯ ಅಥಣಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
2019ರ ಸೆಪ್ಟೆಂಬರ್ 10ರಂದು ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಭರತೇಶ ಮಿರ್ಜಿ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಮನೆಯಿಂದ ಚಾಕೊಲೇಟ್ ತರಲು ಹೊರಟ ಬಾಲಕಿಯನ್ನು ದಾರಿ ಮಧ್ಯದಲ್ಲಿ ತಡೆದ ಭರತೇಶ ಚಾಕೊಲೇಟ್​ ಕೊಡುತ್ತೇನೆ ಬಾ ಎಂದು ಕರೆದುಕೊಂಡು ಹೋಗಿ ತನ್ನ ಮನೆಯಲ್ಲಿ ಅತ್ಯಾಚಾರ ಎಸಗಿದ್ದ. ಬಳಿಕ ಯಾರಿಗೂ ಸಂಶಯಬಾರದ ರೀತಿಯಲ್ಲಿ ಬಾಲಕಿಯ ಸೊಂಟಕ್ಕೆ ಕಲ್ಲು ಕಟ್ಟಿ ಪಕ್ಕದ ಬಾವಿಗೆ ಎಸೆದು ಕೊಲೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ದೃಢವಾಗಿತ್ತು.
ಈ ಬಗ್ಗೆ ಬೆಳಗಾವಿ ಹೆಚ್ಚುವರಿ ನ್ಯಾಯಾಲಯ ಸುದೀರ್ಘವಾಗಿ ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಿದೆ. ನ್ಯಾಯಾಧೀಶರಾದ ಸಿ.ಎಂ ಪುಷ್ಪಲತಾ ಅವರು ಈ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕರಾದ ಎಲ್.ವಿ ಪಾಟೀಲ ವಾದ ಮಂಡಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?