Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಎಸ್‌ಟಿ ಅಧಿಕಾರಿಗಳಿಂದ ಬೃಹತ್ ಜಿಎಸ್‌ಟಿ ವಂಚನೆ ಬಯಲು ಪ್ರಮುಖ ಆರೋಪಿ ಸೆರೆ

ಬೆಳಗಾವಿ; ಬೆಳಗಾವಿ ಜಿಎಸ್​ಟಿ ಗುಪ್ತಚಾರ ನಿರ್ದೇಶಾಲಯ (ಡಿಜಿಡಿಐ) ವಲಯ ಘಟಕದ ಅಧಿಕಾರಿಗಳು ಹರಿಹರದ ಮೇ.ಮರಿಯಂ ಡೀಲರ್ಗಳ ಆವರಣದಲ್ಲಿ ಸುಮಾರು 21.64 ಕೋಟಿ ರೂಪಾಯಿ ಮೌಲ್ಯದ ಜಿಎಸ್ಟಿ ವಂಚನೆ ಪತ್ತೆ ಮಾಡಿದ್ದಾರೆ.

ಪ್ರಮುಖ ಆರೋಪಿ ಮಹಮ್ಮದ್ ಸಕ್ಲೈನ ನ್ನು ಬಂಧಿಸಿ ಬೆಳಗಾವಿ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 14 ದಿನಗಳ ನ್ಯಾಯಾಂಗ ಬಂದನಕೆ ಒಪ್ಪಿಸಲಾಗಿದೆ ಎಂದು ಬೆಳಗಾವಿ ವಲಯದ ಜಿಎಸ್‌ಟಿ ಗುಪ್ತಚಾರ ನಿರ್ದೇಶಾಲಯದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

112.00 ಕೋಟಿ ಮೌಲ್ಯದ ನಕಲಿ ಇನ್ ವಾಯ್ಸ್ ನೀಡಿರುವುದು ಬೆಳಕಿಗೆ ಬಂದಿದೆ. 17.14 ಕೋಟಿ ಮೌಲ್ಯದ ಇನ್ ಫುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ವಂಚನೆಯಾಗಿದೆ. ಸಂಸ್ಥೆಯ ಮೊಹಮ್ಮದ್ ಸಕ್ಲೈನ್ ನಕಲಿ ಬಿಲ್ ಮೂಲಕ ಐಟಿಸಿಯ ವಂಚನೆ ನಡೆಸಿರುವುದಾಗಿ ಒಪ್ಪಿದ್ದಾರೆ. ರಿವರ್ಸ್ ಚಾರ್ಜ್ ಮೆಕಾನಿಸಂ (RCM)ಅಡಿ 4. 50 ಕೋಟಿ ಜಿಎಸ್‌ಟಿಯ ಕಡಿಮೆ ಪಾವತಿಯನ್ನು ಅವರು ಒಪ್ಪಿದ್ದಾರೆ.

ತೆರಿಗೆದಾರರು ನೋಂದಾಯಿಸದ ಪೂರೈಕೆದಾರರಿಂದ ಲೋಹದ ಸ್ಕ್ರಾಪ್ ಹೆಚ್ಚಾಗಿ ಖರೀದಿ ಮಾಡಿದ್ದಾರೆ. ಆದರೆ ಅದರಲ್ಲಿ ಐಟಿಸಿ ಲಭ್ಯವಿಲ್ಲ. ಹೆಚ್ಚುವರಿಯಾಗಿ ನೋಂದಾಯಿತ ಸಂಸ್ಥೆಗಳಿಂದ ಈ ಸಂಸ್ಥೆ ಹೆಚ್ಚಿನ ಖರೀದಿಗಳು ಅಸ್ತಿತ್ವದಲ್ಲಿ ಇಲ್ಲದ ಅಥವಾ ಕಾಲ್ಪನಿಕ ಸಂಸ್ಥೆಗಳಿಂದ ಬಂದಿವೆ.

ಮೇ. ಮರಿಯಂ ಸ್ಕ್ರಾಪ್ ಡೀಲರ್ಗಳು ನೋಂದಾಯಿಸದ ವಿತರಕರಿಂದ ನಿಜವಾದ ಖರೀದಿಗಳನ್ನು ಐಟಿಸಿಗಳೊಂದಿಗೆ ನಕಲಿ ಸಂಸ್ಥೆಗಳಿಂದ ಪಡೆದಿದ್ದಾರೆ. ಕಮಿಷನ್ ಗೆ ನಕಲಿ ಇನ್ವಾಯ್ಸ್ ನೀಡುವ ಉದ್ದೇಶದಿಂದ ನೋಂದಣಿ ಪಡೆಯಲು ನಕಲಿ ದಾಖಲೆ ಬಳಸಿರುವುದು ಸಹ ತನಿಖೆ ವೇಳೆ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,

 

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ