Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಹಿರಿಯ ಸಾಹಿತಿ ಪ್ರಾ.ಬಿ.ಎಸ್.ಗವಿಮಠ ದಂಪತಿಗಳಿಂದ ಮರಣೋತ್ತರ ದೇಹದಾನ

ಬೆಳಗಾವಿ: ಹಿರಿಯ ಸಾಹಿತಿ ಪ್ರಾ.ಬಿ.ಎಸ್.ಗವಿಮಠ ಮತ್ತು ಅವರ ಪತ್ನಿ ಶ್ರೀಮತಿ ಸುಗಂಧ ಬಿ.ಗವಿಮಠ ಇವರು ಕೆ.ಎಲ್.ಇ. ಸಂಸ್ಥೆಯ ಶ್ರೀ ಬಿ.ಎಂ.ಕಂಕಣವಾಡಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗೆ ಮರಣೋತ್ತರ ದೇಹದಾನ ಮಾಡಲು ನಿರ್ಧರಿಸಿದ್ದಾರೆ.
1947 ರಲ್ಲಿ ಇದೇ ಕಂಕಣವಾಡಿ ಆಸ್ಪತ್ರೆಯಲ್ಲಿ ಜನಿಸಿದ್ದ ಇವರಿಗೆ ಈ ಕಾಲೇಜಿನ ಬಗ್ಗೆ ಭಾವನಾತ್ಮಕ ನಂಟಿದೆ. ಕೆ.ಎಲ್.ಇ.ಸಂಸ್ಥೆಯಲ್ಲಿಯೇ ಓದಿ, ಅಲ್ಲಿಯೇ 40 ವರ್ಷಗಳ ಕಾಲ ಶಿಕ್ಷಕರಾಗಿ, ಪ್ರಾಚಾರ್ಯರಾಗಿ, ಕೆಎಲ್‍ಇ ಸಂಸ್ಥೆಯ ಆಜೀವ ಸದಸ್ಯರಾಗಿ, ಪ್ರಸಾರಾಂಗದ ನಿರ್ದೇಶಕರಾಗಿ, ಕೆಎಲ್‍ಇ ಚರಿತ್ರೆ ಬರೆದ ಇತಿಹಾಸಕಾರರೆಂಬ ಹೆಗ್ಗಳಿಕೆ ಇವರದು. ಮರಣಾನಂತರ ಕೂಡ ತನ್ನ ದೇಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಿ ಎಂಬುದೇ ಅವರ ಆಶಯ. ಈ ದಿಶೆಯಲ್ಲಿ ಬೈಲಹೊಂಗಲ ರಾಮಣ್ಣನವರ ಚಾರಿಟೇಬಲ್ ಟ್ರಸ್ಟ್ ಮೂಲಕ ಬಿ.ಎಂ.ಕಂಕಣವಾಡಿ ಕಾಲೇಜಿಗೆ ಮರಣೋತ್ತರ ದೇಹದಾನವನ್ನು ಮಾಡಲು ದಂಪತಿ ಸಮೇತ ವಾಗ್ದಾನ ಮಾಡಿದ್ದರು.
ಈ ಸಂದರ್ಭದಲ್ಲಿ ಶ್ರೀ ಬಿ.ಎಂ.ಕಂಕಣವಾಡಿ ಆಯುರ್ವೇದ ಕಾಲೇಜಿನ ಶರೀರ ರಚನಾಶಾಸ್ತ್ರದ ಮುಖ್ಯಸ್ಥರು ಹಾಗೂ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಬೈಲಹೊಂಗಲದ ಕಾರ್ಯದರ್ಶಿ, ದೇಹದಾನ ಜಾಗೃತಿಗಾಗಿ ತಮ್ಮ ತಂದೆ ಮೃತದೇಹ ಛೇದಿಸಿ ವೈದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಿ ವೈದ್ಯಕೀಯ ಇತಿಹಾಸ ನಿರ್ಮಿಸಿದ ಡಾ.ಮಹಾಂತೇಶ ರಾಮಣ್ಣನವರ ಅವರಿಗೆ ಮರಣೋತ್ತರ ದೇಹದಾನ ಪತ್ರವನ್ನು ಸಲ್ಲಿಸಿದರು. ಡಾ.ಮಹೇಶ ಗುರನಗೌಡರ ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?