Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರಾಮಕೃಷ್ಣ ಮಿಷನ್ ವಾರ್ಷಿಕೋತ್ಸವ 7 ರಿಂದ ಆರಂಭ

 

ಬೆಳಗಾವಿ: ಬೆಳಗಾವಿ ಕೋಟೆ ಆವರಣದ ರಾಮಕೃಷ್ಣ ಮಿಷನ್ ನ ವಾರ್ಷಿಕೋತ್ಸವ ಫೆಬ್ರವರಿ 7 ರಿಂದ 9 ರವರೆಗೆ ನಡೆಯಲಿದೆ.

7 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:45 ರವರೆಗೆ ಭಜನೆ ಹಾಗೂ ಪ್ರವಚನ ನಡೆಯಲಿದೆ. ವ್ಯಕ್ತಿತ್ವ ನಿರ್ಮಾಣ ಕುರಿತು ಗುಜರಾತ್ ರಾಜ್ ಕೋಟ್ ಶ್ರೀರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ಗುಣೇಶಾನಂದಜೀ ಮಹಾರಾಜ ಅವರು ಯುವಶಕ್ತಿ ದೇವೋಭವ, ಮದಿಹಳ್ಳಿ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಮಂಗಳನಾಥನಂದಜೀ ಮಹಾರಾಜ ಅವರು ಶ್ರದ್ಧೆಯ ವೈಜ್ಞಾನಿಕ ತಳಹದಿ ಮತ್ತು ಬೆಳಗಾವಿ ರಾಮಕೃಷ್ಣ ಮಿಷನ್ ಸ್ವಾಮಿ ಮೋಕ್ಷಾತ್ಮನಂದ ಅವರು ಧ್ಯಾನದ ಪ್ರಾಮುಖ್ಯ ಮತ್ತು ಅಭ್ಯಾಸ ವಿಧಾನ ವಿಷಯವಾಗಿ ಮಾತನಾಡುವರು. ನಂತರ ಸಂವಾದ, ಪ್ರಶ್ನೋತ್ತರ ಏರ್ಪಡಿಸಲಾಗಿದೆ.

ಫೆಬ್ರವರಿ 8 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.45 ರವರೆಗೆ ಭಜನೆ ಮತ್ತು ಪ್ರವಚನ ನಡೆಯಲಿದೆ. ಶಿಕ್ಷಕನ ವ್ಯಕ್ತಿತ್ವ ನಿರ್ಮಾಣ ಕುರಿತು ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕನ ಪಾತ್ರ ವಿಷಯವಾಗಿ ಗುಜರಾತ್ ರಾಜ್ ಕೋಟ್ ರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ಗುಣೇಶಾನಂದಜೀ ಮಹಾರಾಜ, ಮದಿಹಳ್ಳಿ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಮಂಗಳನಾಥ ನಂದಜೀ ಮಹಾರಾಜ ಅವರು ಶಿಕ್ಷಣ- ಶಿಕ್ಷಕ ಮತ್ತು ಬೆಳಗಾವಿ ರಾಮಕೃಷ್ಣ ಮಿಷನ್ ನ ಮೋಕ್ಷಾತ್ಮನಂದ ಅವರು ಧ್ಯಾನದ ಪ್ರಾಮುಖ್ಯ ಮತ್ತು ಅಭ್ಯಾಸ ವಿಧಾನ ಕುರಿತು ಮಾತನಾಡುವರು. ಪ್ರಶ್ನೋತ್ತರ ಹಾಗೂ ಸಂವಾದ ನಡೆಯಲಿದೆ. ಸಂಜೆ 6 ಗಂಟೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಭಜನಾ ಸಂಧ್ಯಾದಲ್ಲಿ ಬೆಂಗಳೂರಿನ ಖ್ಯಾತ ಹಿಂದೂಸ್ತಾನಿ ಗಾಯಕ ಸುರಮಣಿ ದತ್ತಾತ್ರೇಯ ವೇಲಣಕರ ಅವರಿಂದ ಗಾಯನ ನಡೆಯಲಿದೆ. ಯೋಗೇಶ್ ಭಟ್ ಮತ್ತು ಅಶ್ವತ್ ಶೆಣೈ ಅವರು ತಬಲಾ, ಸಾರಂಗ ಕುಲಕರ್ಣಿ ಅವರು ಹಾರ್ಮೋನಿಯಂ ಸಹಕಾರ ನೀಡುವವರು.

ಫೆಬ್ರವರಿ 9 ರಂದು ಆಧ್ಯಾತ್ಮಿಕ ಸಮ್ಮೇಳನ ನಡೆಯಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ರವರೆಗೆ ಭಜನೆ ಮತ್ತು ಪ್ರವಚನ ಏರ್ಪಡಿಸಲಾಗಿದೆ.
ಜೀವನ ಎಂದರೇನು ವಿಷಯವಾಗಿ ತಮಿಳುನಾಡು ಊಟಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ರಾಘವೇಶಾನಂದಜೀ ಮಹಾರಾಜ ಅವರು ಮಾತನಾಡುವರು. ಗುಜರಾತ್ ರಾಜ್ ಕೋಟ್ ರಾಮಕೃಷ್ಣ ಮಠದ ಸ್ವಾಮಿ ಗುಣೇಶಾನಂದಜೀ ಅವರು ಭಾಗವತದಲ್ಲಿರುವ ಮಾನವ ಧರ್ಮ, ಮದಿಹಳ್ಳಿ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಮಂಗಳನಾಥ ನಂದಜೀ ಮಹಾರಾಜ ಅವರು ಉಪಯುಕ್ತ ಸಲಹೆಗಳು ವಿಷಯವಾಗಿ ಮಾತನಾಡುವರು. ನಂತರ ಸಂವಾದ, ಪ್ರಶ್ನೋತ್ತರ ಏರ್ಪಡಿಸಲಾಗಿದೆ. ಸಂಜೆ 6 ಕ್ಕೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇವರಿಂದ ಪಂಚವಟಿ ಎಂಬ ಯಕ್ಷಗಾನ ಪ್ರದರ್ಶನವಾಗಲಿದೆ. ಕೆರೆಮನೆ ಶಿವಾನಂದ ಹೆಗಡೆ ಅವರ ನಿರ್ದೇಶನ ಇರಲಿದೆ ಎಂದು ರಾಮಕೃಷ್ಣ ಮಿಷನ್ ಆಶ್ರಮದ ಪ್ರಕಟಣೆ ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು