Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್ ನೀಡಿದ ನ್ಯಾಯಾಲಯ

ಬೆಳಗಾವಿ: ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಇವರು ಭಾಗವಹಿಸಲು ನ್ಯಾಯಾಲಯ ಅವಕಾಶ ನೀಡಿದ್ದರಿಂದ ಈ ಇಬ್ಬರು ಈಗ ಮತದಾನ ಮಾಡುವ ಹಕ್ಕು ಪಡೆದಿದ್ದಾರೆ.

ಮಹಾನಗರ ಪಾಲಿಕೆ ಸದಸ್ಯರಾದ ಮಂಗೇಶ್ ಪವಾರ್ ಮತ್ತು ಜಯಂತ ಯಾದವ್ ಅವರು ಸದಸ್ಯತ್ವದಿಂದ ಅನರ್ಹತೆಗೊಂಡಿದ್ದರು. ಮಾರ್ಚ್ 15 ರಂದು ನಡೆಯುವ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಸ್ಪರ್ಧೆಸಲು ಮತ್ತು ಮತ ಚಲಾಯಿಸಲು ಸಾಧ್ಯವಾಗದೇ ಇರುವ ಪರಿಸ್ಥಿತಿ ಇತ್ತು. ಆದರೆ ಇದೀಗ ನ್ಯಾಯಾಲಯ ಇವರಿಗೆ ಅವಕಾಶ ಕಲ್ಪಿಸಿರುವುದರಿಂದ ಇಬ್ಬರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾಗವಹಿಸಬಹುದಾಗಿದೆ.

ಬೆಳಗಾವಿಯ ಗೋವಾವೇಸ್ ನಲ್ಲಿ ನಿರ್ಮಿಸಲಾಗಿರುವ ತಿನಿಸು ಕಟ್ಟೆ ಮಳಿಗೆಗಳನ್ನು ಪತ್ನಿಯರ ಹೆಸರಿನಲ್ಲಿ ಪಡೆದಿದ್ದಾರೆ ಎಂಬ ಕಾರಣಕ್ಕೆ ಪ್ರಾದೇಶಿಕ ಆಯುಕ್ತ ಶೆಟ್ಟೆಣ್ಣವರ ಅವರು ಈ ಇಬ್ಬರನ್ನು ಸದಸ್ಯರನ್ನು ಅನರ್ಹತೆಗೊಳಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯ ಇಬ್ಬರು ಸದಸ್ಯರಿಗೆ ಮತದಾನ ಮಾಡುವ ಹಕ್ಕು ನೀಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ ಪಾಟೀಲ ಅವರು, ಅಧಿಕಾರಿಗಳು ಕಾಂಗ್ರೆಸ್ ನಾಯಕರ ಮಾತು ಕೇಳಿ ಕಾನೂನುಬಾಹಿರವಾಗಿ ಬಿಜೆಪಿಯ ಇಬ್ಬರು ಸದಸ್ಯರನ್ನು ಅನರ್ಹತೆಗೊಳಿಸಿದ್ದರು. ಆದರೆ ಈ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದು ಸತ್ಯಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ. ಜಯಂತ ಯಾದವ್ ಮತ್ತು ಮಂಗೇಶ ಪವಾರ್ ಅವರನ್ನು ಕಾಂಗ್ರೆಸ್ ಸರಕಾರದ ಮಾತು ಕೇಳಿ ಪ್ರಾದೇಶಿಕ ಆಯುಕ್ತರು ಅನರ್ಹತೆಗೊಳಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದಾಗ ನಗರಾಭಿವೃದ್ಧಿ ಕಾರ್ಯದರ್ಶಿಗಳು ವಿಚಾರಣೆ ನಡೆಸಲು ನ್ಯಾಯಾಲಯ ಹೇಳಿತ್ತು. ಅಲ್ಲಿ ನಮ್ಮ ವಿರುದ್ಧವೇ ಕಾರ್ಯದರ್ಶಿಗಳು ಆದೇಶ ನೀಡಿದ್ದರು. ಈಗ ನ್ಯಾಯಾಲಯ ಮಂಗೇಶ್ ಮತ್ತು ಜಯಂತ್ ಪರ ಆದೇಶ ಹೊರಡಿಸಿದೆ. ನ್ಯಾಯಾಲಯದ ಈ ಆದೇಶವನ್ನು ಸ್ವಾಗತಿಸಲಾಗುವುದು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಸರಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದರ ಬಗ್ಗೆಯೂ ನ್ಯಾಯಾಲಯ ಹೇಳಿದೆ. ಯಾರದ್ದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕೆಲಸ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು