Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಅಧ್ಯಕ್ಷ ನಡ್ಡಾ ಪತ್ನಿಯ ಕಾರು ಕಳ್ಳತನ

 

ದೆಹಲಿ :
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಕಾರನ್ನು ದೆಹಲಿಯಲ್ಲಿ ಕಳ್ಳತನ ಮಾಡಲಾಗಿದೆ. ಕದ್ದ ಕಾರನ್ನು ಗುರುಗ್ರಾಮದ ಕಡೆ ಕಳ್ಳರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದೆಹಲಿಯ ಗೋವಿಂದಪುರ ಪ್ರದೇಶದಲ್ಲಿ ನಿಲ್ಲಿಸಿದ್ದ ಜೆ. ಪಿ. ನಡ್ಡಾ ಪತ್ನಿಯ Toyota Fortuner ಕಾರನ್ನು ಮಾರ್ಚ್‌ 19ರಂದು ಮಧ್ಯಾಹ್ನ 3 ರಿಂದ 4 ಗಂಟೆಯ ಅವಧಿಯಲ್ಲಿ ಕಳ್ಳತನ ಮಾಡಲಾಗಿದೆ. ಈ ಕುರಿತು ಕಾರಿನ ಚಾಲಕ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿತ್ತು. ಜೆ. ಪಿ. ನಡ್ಡಾ ಪತ್ನಿಯ ಕಾರು ಚಾಲಕ ಜೋಗಿಂದರ್ ಸರ್ವೀರ್ಸ್‌ಗಾಗಿ ಕಾರನ್ನು ತಂದಿದ್ದರು. ಸರ್ವೀಸ್ ಮುಗಿಸಿಕೊಂಡು ವಾಪಸ್ ಆಗುವಾಗ ಊಟಕ್ಕಾಗಿ ಗೋವಿಂದಪುರ ಪ್ರದೇಶದಲ್ಲಿ ನಿಲ್ಲಿಸಿದ್ದರು. ಅಲ್ಲಿಂದಲೇ ಕಾರನ್ನು ಕಳ್ಳತನ ಮಾಡಲಾಗಿದೆ.

ಮಾರ್ಚ್‌ 19ರಂದು Toyota Fortuner ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಇದುವರೆಗೂ ಕಾರಿನ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗೋವಿಂದಪುರ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಆಗ ಕಾರು ಗುರುಗ್ರಾಮ ಕಡೆಗೆ ತೆರಳುತ್ತಿರುವ ದೃಶ್ಯಗಳು ಸೆರೆಯಾಗಿವೆ. ಬಳಿಕ ಯಾವುದೇ ಮಾಹಿತಿ ಸಿಕ್ಕಿಲ್ಲ.

ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ. ಕಾರನ್ನು ಹುಡುಕಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೆ. ಪಿ. ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಕಾರು ಕಳ್ಳತನ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದು ಹೈ ಪ್ರೊಫೈಲ್ ಪ್ರಕರಣವಾದ ಕಾರಣ ವಿಶೇಷ ತಂಡವನ್ನು ರಚನೆ ಮಾಡಿಕೊಂಡು ಕಾರು ಚಾಲಕ ಜೋಗಿಂದರ್ ನೀಡಿದ ಮಾಹಿತಿ ಆಧರಿಸಿ ತನಿಖೆ ಕೈಗೊಂಡಿದ್ದಾರೆ.

ಕಾರನ್ನು ದೆಹಲಿ ಗಡಿ ದಾಟಿಸಿ ಬೇರೆ ರಾಜ್ಯಕ್ಕೆ ಸಾಗಣೆ ಮಾಡಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಅಂದಾಜಿಸಿದ್ದಾರೆ. ಅಲ್ಲದೇ ಕಾರು ಸರ್ವೀಸ್ ಮಾಡಿಸಿಕೊಂಡು ಬಂದ ಬಳಿಕ ಕಳ್ಳತನವಾಗಿದೆ ಎಂದರೆ ಸರ್ವೀಸ್ ಸೆಂಟರ್ ಸುತ್ತಲಿನ ಸ್ಥಳೀಯರ ಕೈವಾಡ ಇರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಮುಂದುವರೆದಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?