Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

ಬೆಂಗಳೂರು : ರಾಜ್ಯದಲ್ಲಿ ಕೇಂದ್ರ ಹಾಗೂ ಸರ್ಕಾರದ ವಾಹನಗಳಿಗೆ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಅವಕಾಶವಿದೆ. ಆದರೆ ಬೆಂಗಳೂರಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ. ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆಗೊಳಿಸಲು ಪ್ಲಾನ್ ಮಾಡಿದೆ. ಮೊದಲಿಗೆ 500, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲಾಗುತ್ತದೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರೋ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತು ಪಡಿಸಿ, ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಸರ್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌. ಉದಾಹರಣೆಗೆ ಕೆಎಸ್​ಆರ್​ಟಿಸಿ ನಿಗಮವಾದ್ರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.

ಕೂಡಲೇ ಇಂತಹ ನಾಮಫಲಗಳನ್ನು ತೆರವುಗೊಳಿಸಬೇಕೆಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ಖಾಸಗಿ ವಾಹನಗಳ ಮೇಲೆ ಸರ್ಕಾರದ ಯಾವುದೇ ಲಾಂಛನವನ್ನು ಬಳಸುವಂತಿಲ್ಲ ಸರ್ಕಾರಿ ಇಲಾಖೆ ಮತ್ತು ಬ್ಯಾಂಕ್ ಉದ್ಯೋಗಿಗಳು ತಮ್ಮ ಸ್ವಂತ ವಾಹನಗಳ ಮೇಲೆ ಕರ್ನಾಟಕ ಸರ್ಕಾರ, ಭಾರತ ಸರ್ಕಾರ ಎಂದು ಹಾಕಿಕೊಂಡಿರುತ್ತಾರೆ ಅದನ್ನು ಮೊದಲು ತೆರವು ಮಾಡಬೇಕು.
ಇಷ್ಟು ದಿನಗಳ ಕಾಲ ತಮ್ಮ ಸ್ವಂತ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ ಬೋರ್ಡ್ ಹಾಕುತ್ತಿದ್ದವರಿಗೆ ಸಾರಿಗೆ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸಲು ಪ್ಲಾನ್ ಮಾಡ್ತಿದ್ದು ಈ ಕಾರ್ಯಾಚರಣೆ ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತದೆ ಕಾದು ನೋಡಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ