Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

ಬೆಂಗಳೂರು : ರಾಜ್ಯದಲ್ಲಿ ಕೇಂದ್ರ ಹಾಗೂ ಸರ್ಕಾರದ ವಾಹನಗಳಿಗೆ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಅವಕಾಶವಿದೆ. ಆದರೆ ಬೆಂಗಳೂರಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ. ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆಗೊಳಿಸಲು ಪ್ಲಾನ್ ಮಾಡಿದೆ. ಮೊದಲಿಗೆ 500, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲಾಗುತ್ತದೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರೋ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತು ಪಡಿಸಿ, ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಸರ್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌. ಉದಾಹರಣೆಗೆ ಕೆಎಸ್​ಆರ್​ಟಿಸಿ ನಿಗಮವಾದ್ರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.

ಕೂಡಲೇ ಇಂತಹ ನಾಮಫಲಗಳನ್ನು ತೆರವುಗೊಳಿಸಬೇಕೆಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ಖಾಸಗಿ ವಾಹನಗಳ ಮೇಲೆ ಸರ್ಕಾರದ ಯಾವುದೇ ಲಾಂಛನವನ್ನು ಬಳಸುವಂತಿಲ್ಲ ಸರ್ಕಾರಿ ಇಲಾಖೆ ಮತ್ತು ಬ್ಯಾಂಕ್ ಉದ್ಯೋಗಿಗಳು ತಮ್ಮ ಸ್ವಂತ ವಾಹನಗಳ ಮೇಲೆ ಕರ್ನಾಟಕ ಸರ್ಕಾರ, ಭಾರತ ಸರ್ಕಾರ ಎಂದು ಹಾಕಿಕೊಂಡಿರುತ್ತಾರೆ ಅದನ್ನು ಮೊದಲು ತೆರವು ಮಾಡಬೇಕು.
ಇಷ್ಟು ದಿನಗಳ ಕಾಲ ತಮ್ಮ ಸ್ವಂತ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ ಬೋರ್ಡ್ ಹಾಕುತ್ತಿದ್ದವರಿಗೆ ಸಾರಿಗೆ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸಲು ಪ್ಲಾನ್ ಮಾಡ್ತಿದ್ದು ಈ ಕಾರ್ಯಾಚರಣೆ ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತದೆ ಕಾದು ನೋಡಬೇಕಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು