Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಚಿಕ್ಕೋಡಿ ಪುರಸಭೆ ಚುನಾವಣೆ : ಕೊನೆಗೂ ಅವಿರೋಧವಾಗಿ ಆಯ್ಕೆ !

ಚಿಕ್ಕೋಡಿ ಪುರಸಭಾ ಚುನಾವಣೆ ಈ ಬಾರಿ ಕುತೂಹಲಕ್ಕೆ ಕಾರಣವಾಗಿತ್ತು. ಯಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುತ್ತಾರೆ ಎಂಬ ನಿಗೂಢತೆ ಕೊನೆವರೆಗೂ ಇತ್ತು. ಆದರೆ ಹಿರಿಯ ನಾಯಕರ ನಿರ್ಧಾರದಿಂದಾಗಿ ಇದೇ ಮೊದಲ ಬಾರಿಗೆ ಆಯ್ಕೆಯಾದವರಿಗೆ ಅಧಿಕಾರದ ಪಟ್ಟ ಲಭ್ಯವಾಗಿದೆ.

ಬೆಳಗಾವಿ: ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಇರ್ಫಾನ್ ಬೇಪಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ, ಇಬ್ಬರೂ ಅವಿರೋಧವಾಗಿ ಆಯ್ಕೆ ಆಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಚಿಕ್ಕೋಡಿ ಪುರಸಭೆ ಒಟ್ಟು 23 ಸದಸ್ಯರನ್ನು ಹೊಂದಿದೆ. ಇದರಲ್ಲಿ ಬಿಜೆಪಿ 13, ಕಾಂಗ್ರೆಸ್ 10 ಸದಸ್ಯರನ್ನು ಹೊಂದಿದೆ. ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಮತ್ತು ಸದ್ಯ ಹೊಸದಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೀಣಾ ಅವರ ಪತಿ ಜಗದೀಶ ಅವರ ಕಾರ್ಯತಂತ್ರದ ಫಲವಾಗಿ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಮಿಶ್ರ ಆಡಳಿತ ಸಾಧ್ಯವಾಗಿದೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ತಲಾ ಒಬ್ಬೊಬ್ಬರು ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಕೊನೆಗೂ ತಹಸಿಲ್ದಾರ್ ಚಿದಂಬರ ಕುಲಕರ್ಣಿ ಅವರು ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ. ಚಿಕ್ಕೋಡಿಯ 20ನೇ ವಾರ್ಡಿನ ವೀಣಾ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ಪರ ಗೆಲುವು ಸಾಧಿಸಿದ್ದರು. ಎಂಟನೇ ವಾರ್ಡಿನ ಇರ್ಫಾನ್ ಅವರು ಸಹ ಮೊದಲಬಾರಿ ಆಯ್ಕೆಯಾಗಿ ಅಧಿಕಾರ ಪಡೆದುಕೊಂಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು