Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKINGರೇಣುಕಾ ಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್ ಗೆ ಮತ್ತೆ ಜೈಲು

ಹೊಸದಿಲ್ಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಸುಪ್ರೀಂ ಕೋರ್ಟ್‌ ಗುರುವಾರ (ಆ.14) ಜಾಮೀನು ರದ್ದು ಮಾಡಿ ಆದೇಶ ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮಹದೇವನ್‌ ಅವರ ವಿಭಾಗೀಯ ಪೀಠ ಗುರುವಾರ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ಜಾಮೀನು ಅರ್ಜಿ ತೀರ್ಪು ಪ್ರಕಟಿಸಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿದ್ದರು.

ಕರ್ನಾಟಕ ಸರ್ಕಾರ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಗುರುವಾರ ಆದೇಶವನ್ನು ಪ್ರಕಟಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆಯನ್ನು ಶೀಘ್ರವೇ ಪ್ರಾರಂಭಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಹೈಕೋರ್ಟ್‌ ತೀರ್ಪಿನಲ್ಲಿನ ಲೋಪಗಳನ್ನು ಎತ್ತಿ ಹಿಡಿದಿದೆ. ಅಲ್ಲದೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರದಲ್ಲಿ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ಕೆಲ ದಿನಗಳಿಂದ ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್‌ ಗುರುವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಸಾಕ್ಷಿಗಳ ಬೆದರಿಕೆ ಮತ್ತು ಇತರ ಅಕ್ರಮಗಳನ್ನು ಸಮರ್ಪಕವಾಗಿ ಪರಿಗಣಿಸದೆ ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ರದ್ದುಗೊಳಿಸಿದೆ ಎಂದು ಪೀಠ ಹೇಳಿದೆ. ಹೈಕೋರ್ಟ್‌ನ ಆದೇಶವನ್ನು "ವಿಕೃತ" ಮತ್ತು "ಸಂಪೂರ್ಣವಾಗಿ ಅನಗತ್ಯ" ಎಂದು ಕರೆದರು.

"ಜಾಮೀನು ನೀಡಲು ಯಾವುದೇ ಕಾನೂನು ಕಾರಣವಿಲ್ಲ" ಎಂದು ಹೇಳಿದ ಪೀಠ, ದರ್ಶನ್ ಅವರ ಸ್ವಾತಂತ್ರ್ಯವು "ನ್ಯಾಯದ ಆಡಳಿತವನ್ನು ಹಳಿತಪ್ಪಿಸುವ ಅಪಾಯವನ್ನುಂಟುಮಾಡಿದೆ" ಎಂದು ಹೇಳಿದರು.

“ಕಾನೂನಿಗಿಂತ ಯಾವುದೇ ವ್ಯಕ್ತಿ ದೊಡ್ಡವರಲ್ಲ, ಕಾನೂನಿಗೆ ವಿಧೇಯತೆ ಒಂದು ನಿಯಮ, ಉಪಕಾರವಲ್ಲ. ಕಸ್ಟಡಿಯಲ್ಲಿರುವ ದರ್ಶನ್‌ಗೆ ಯಾವುದೇ ವಿಶೇಷ ಉಪಚಾರ ನೀಡಬಾರದು” ಎಂದು ಪೀಠವು ರಾಜ್ಯ ಮತ್ತು ಜೈಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತು.

"ಆರೋಪಿಗಳಿಗೆ ಜೈಲು ಆವರಣದಲ್ಲಿ ಪಂಚತಾರಾ ಗೌರವ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನವೇ ನಾವು ಜೈಲು ಸೂಪರಿಂಟೆಂಡೆಂಟ್ ಅನ್ನು ಅಮಾನತುಗೊಳಿಸುತ್ತೇವೆ" ಎಂದು ನ್ಯಾ.ಪಾರ್ದಿವಾಲಾ ಹೇಳಿದರು. ಜೈಲಿನಲ್ಲಿ ಧೂಮಪಾನ ಮಾಡಲು ಅಥವಾ ಮದ್ಯಪಾನ ಮಾಡಲು ಅವಕಾಶ ನೀಡದಂತೆ ಎಚ್ಚರಿಕೆ ನೀಡಿದರು.

2024ರ ಜೂನ್‌ 9ರಂದು ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಬೆಂಗಳೂರಿನ ಪಟ್ಟಣಗೆರೆ ಶೆಡ್‌ನ‌ಲ್ಲಿ ರೇಣುಕಾ‌ಸ್ವಾಮಿಯನ್ನು ಹತ್ಯೆಗೈದಿತ್ತು. ಈ ಸಂಬಂಧ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಹೈಕೋರ್ಟ್‌ ಆರೋಪಿಗಳಿಗೆ ಡಿಸೆಂಬರ್‌ನಲ್ಲಿ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?