Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ನೂ ಹಸಿರು ನಿಶಾನೆ ತೋರದ ಬ್ರಿಟನ್ : ಸದ್ಯ ಭಾರತದಲ್ಲೇ ಆಶ್ರಯ ಸಾಧ್ಯತೆ

ನವದೆಹಲಿ: ಬಾಂಗ್ಲಾದೇಶದ ನಿಕಟ ಪೂರ್ವ ಪ್ರಧಾನಿಯವರಿಗೆ ರಕ್ಷಣೆ ನೀಡಲು ಬ್ರಿಟನ್ ಇದುವರೆಗೆ ಹಸಿರು ನಿಶಾನೆ ತೋರಿಲ್ಲ. ಹೀಗಾಗಿ ಅವರು ಸದ್ಯಕ್ಕೆ ಭಾರತದಲ್ಲಿ ಉಳಿಯುವ ಸಾಧ್ಯತೆ ಇದೆ.

ಮೀಸಲಾತಿ ಪ್ರತಿಭಟನೆ ಹಿಂಸಾರೂಪ ಪಡೆದ ಹಿನ್ನೆಲೆಯಲ್ಲಿ ಜೀವಭಯದಿಂದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಢಾಕಾ ತೊರೆದ ಬಾಂಗ್ಲಾದೇಶದ ಶೇಖ್ ಹಸೀನಾ ಇನ್ನೆರಡು ದಿನ ಭಾರತದಲ್ಲೇ ಉಳಿಯಲಿದ್ದಾರೆ. ಭಾರತದ ರಫೇಲ್ ಯುದ್ಧ ವಿಮಾನಗಳ ಬೆಂಗಾವಲಿನಲ್ಲಿ ಸೋಮವಾರ ಸಂಜೆ ನವದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹಸೀನಾ ಅವರನ್ನು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆಯಲ್ಲದೆ, ಭಿಗಿ ಭದ್ರತೆಯನ್ನೂ ನೀಡಲಾಗಿದೆ.

ಜೀವಭಯದಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾ ಅವರು ಲಂಡನ್‌ಗೆ ತೆರಳಿ ಅಲ್ಲಿಯೇ ಜೀವಿಸುವ ಯೋಜನೆ ಹೊಂದಿದ್ದರು. ಆದರೆ ಹಸೀನಾ ಅವರು ಯಾವುದೇ ತನಿಖೆ ಎದುರಿಸುವ ಸನ್ನಿವೇಶ ಎದುರಾದರೆ, ಅದಕ್ಕೆ ಬ್ರಿಟನ್ ಸರ್ಕಾರ ಕಾನೂನಾತ್ಮಕ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಬ್ರಿಟನ್ ಸ್ಪಷ್ಟ ಸಂದೇಶ ರವಾನಿಸಿದ ನಂತರ ಹಸೀನಾ ಅವರು ತಮ್ಮ ಯೋಜನೆಯನ್ನು ಒಂದೆರಡು ದಿನಗಳ ಮಟ್ಟಿಗೆ ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲಂಡನ್‌ಗೆ ಹೋಗುವ ಯೋಜನೆಯನ್ನು ಭಾರತಕ್ಕೆ ತಿಳಿಸಿಯೇ ಅವಾಮಿ ಲೀಗ್‌ನ ನಾಯಕಿ ಹಸೀನಾ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದರು. ಆದರೆ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮ್ಮಿ, ಬಾಂಗ್ಲಾದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಹಿಂಸಾಚಾರಕ್ಕೆ ಹಲವು ಮುಗ್ಧರು ಬಲಿಯಾಗಿದ್ದಾರೆ. ಈ ಕುರಿತು ವಿಶ್ವಸಂಸ್ಥೆ ನೇತೃತ್ವದಲ್ಲಿ ಸ್ವತಂತ್ರ ಮತ್ತು ವಿಸ್ತ್ರತ ತನಿಖೆಯ ಅನಿವಾರ್ಯತೆ ಇದೆ ಎಂದಿದ್ದರಿಂದ ಹಸೀನಾ ಗೊಂದಲಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಸದ್ಯದ ಪರಿಸ್ಥಿತಿ ಗಮನಿಸಿದರೆ ಅವರು ಭಾರತದಲ್ಲಿ ತಮ್ಮ ಪರಮಾಪ್ತ ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯ ಕೋರಿ ಇಲ್ಲಿ ಉಳಿಯುವ ಸಾಧ್ಯತೆ ಹೆಚ್ಚಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ