Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಗ್ ಬಾಸ್ : ಮೊದಲ ದಿನವೇ ಚೈತ್ರಾ ಧಗಧಗ..

ಬೆಂಗಳೂರು :ಚೈತ್ರಾ ಕುಂದಾಪುರ ವೈಲೆಂಟ್ ಆಗಿಬಿಟ್ಟಿದ್ದಾರೆ. ನರಕದಲ್ಲಿದ್ದುಕೊಂಡು ಸ್ವರ್ಗವಾಸಿಗಳಿಗೆ ಚೈತ್ರಾ ಕುಂದಾಪುರ ನರಕ ತೋರಿಸುತ್ತಿದ್ದಾರೆ. ರೂಲ್ಸ್‌ ಬಗ್ಗೆ ಹಲವರ ಮಧ್ಯೆ ಚೈತ್ರಾ ಕುಂದಾಪುರ ವಾದಕ್ಕಿಳಿದ್ದಾರೆ. ತಾನೇ ಸರಿ, ತನ್ನ ವಾದವೇ ಸರಿ ಅಂತ ಚೈತ್ರಾ ಕುಂದಾಪುರ ಆರ್ಭಟಿಸಿದ್ದಾರೆ. ನಾನು ಮಾತನಾಡಬಾರದು ಅಂತ ನೀವು ಹೇಳಂಗಿಲ್ಲ ಅಂತಲೂ ಸ್ವರ್ಗನಿವಾಸಿಗಳ ವಿರುದ್ಧ ಚೈತ್ರಾ ಕುಂದಾಪುರ ಸಿಡಿದಿದ್ದಾರೆ.

ಮೊದಲ ದಿನ ಬಿಗ್ ಬಾಸ್ ಸ್ವರ್ಗ ವಾಸಿಗಳಿಗೆ ವಿಶೇಷ ಸವಲತ್ತು ನೀಡಿದ್ದರು. ನರಕದಲ್ಲಿರುವ ಇಬ್ಬರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ಅವರಿಂದ ಮನೆಗೆಲಸ ಮಾಡಿಸಬೇಕಾಗಿತ್ತು. ಇದಕ್ಕೆ ಚೈತ್ರಾ ಮತ್ತು ಗೋಲ್ಡ್ ಸುರೇಶ್ ಅವರನ್ನು ಆಯ್ಕೆ ಮಾಡಲಾಗಿತ್ತು. ಕ್ಲೀನಿಂಗ್ ಮಾಡುವಾಗ ಚೈತ್ರಾ ಅವರು ಸ್ವರ್ಗದಲ್ಲಿರುವವರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಸೇಬು ಹಣ್ಣನ್ನು ತಿಂದ ವಿಚಾರಕ್ಕೆ ಜಗಳ ನಡೆದಿದೆ.ಹಾಗೆಯೆ ಸ್ವರ್ಗದಲ್ಲಿರುವವರು ಯಾವುದೇ ಕೆಲಸ ಮಾಡುವಂತಿಲ್ಲ ಎಂಬ ನಿಯಮವಿದ್ದರೂ ಲಾಯರ್‌ ಜಗದೀಶ್ ಟಾಯ್ಲೆಟ್ ಮತ್ತು ವಾಷ್ ಬೇಸಿನ್ ತೊಳೆದ ಕಾರಣ ಮತ್ತೊಂದು ಜಗಳ ನಡೆದಿದೆ. ಅತ್ತ ನರಕ ವಾಸಿಗಳಿಗೆ ಸ್ವರ್ಗದಿಂದ ಯಾವುದೇ ವಸ್ತು ಅಥವಾ ಏನನ್ನೂ ನೀಡಬಾರದು ಎಂಬ ನಿಯಮವಿದ್ದರೂ ಜಗದೀಶ್ ಅವರು ಬಿಸಿ ನೀರು ಕೊಟ್ಟಿದ್ದಾರೆ. ನಿಯಮವನ್ನು ಮುರಿದ ತಪ್ಪಿಗೆ ಬಿಗ್ ಬಾಸ್ ಸ್ವರ್ಗದಲ್ಲಿರುವವರಿಗೆ ನೀಡಿದ ಕೆಲವು ಗ್ರೋಸರಿ ಐಟಮ್​ಗಳನ್ನು ಹಿಂತೆಗೆದುಕೊಂಡಿದ್ದಾರೆ

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಕನ್ನಡ ಸೀಸನ್ 11 ನಲ್ಲಿ ಈ ಬಾರಿ ಸ್ಪರ್ಗ ಮತ್ತು ನರಕ ಎಂಬ ಎರಡು ಮನೆಗಳಿದೆ. ಮೊದಲ ದಿನ ಬಿಗ್ ಬಾಸ್‌ ನಲ್ಲಿ ನಿಯಮಗಳನ್ನು ಫಾಲೋ ಮಾಡೋ ವಿಚಾರದಲ್ಲೇ ಹಲವು ವಾಗ್ವಾದಗಳು ನಡೆದವು. ಬಿಗ್‌ಬಾಸ್ ನಿಯಮವನ್ನು ಅರ್ಥ ಮಾಡಿಕೊಳ್ಳವಲ್ಲೇ ಮನೆ ಮಂದಿ ಸೋತರು. ಸ್ವರ್ಗ ಮತ್ತು ನರಕದಲ್ಲಿ ಯಾರು ಯಾವ ನಿಯಮ ಫಾಲೋ ಮಾಡಬೇಕೆನ್ನುವುದರ ಬದಲಾಗಿ ಹಲವಾರು ಗೊಂದಲಗಳೇ ಹೆಚ್ಚಾಯ್ತು.

ಸ್ವರ್ಗದ ಇಡೀ ಮನೆಯನ್ನು ಕ್ಲೀನ್ ಮಾಡಲು ಚೈತ್ರಾ ಕುಂದಾಪುರ ಮತ್ತು ಸುರೇಶ್ ಅವರನ್ನು ಆಯ್ಕೆ ಮಾಡಲಾಗಿತ್ತು. ನರಕ ನಿವಾಸಿಗಳು ಇಷ್ಟನ್ನೂ ನಾವು ಸರಿಯಾಗಿ ಮಾಡಿಲ್ಲವೆಂದರೆ ಸ್ವರ್ಗ ನಿವಾಸಿಗಳೇ ಹೊಣೆ ಆಗುತ್ತಾರೆ. ಕೆಲಸ ಕರೆಕ್ಟ್ ಮಾಡದೆ ಟೈಂ ವೇಸ್ಟ್ ಮಾಡಬೇಕು ಎಂದು ಮಾತನಾಡಿಕೊಂಡರು. ಇತ್ತ ಸ್ವರ್ಗದಲ್ಲಿ ನರಕ ವಾಸಿಗಳು ಮಿಸ್ಟೇಕ್ ಮಾಡಲು ಪ್ರಯತ್ನ ಪಡಬಹುದು ಎಂದು ಮಾತನಾಡಿಕೊಂಡರು.


ಈ ಮಧ್ಯೆ ಲಾಯರ್ ಜಗದೀಶ್ ಬಂದು ಸ್ವರ್ಗದ ವಾತಾವರಣ ಹಾಳಾಗಿದೆ. ಮೆಲ್ಲಗೆ ಮಾತನಾಡಬೇಕು ಎಂಬ ಆದೇಶ ಬಂದಿದೆ ಎಂದು ಹೇಳಿದ್ದಾರೆ ಎಂದು ಪಿನ್ ಇಟ್ಟರು. ಇದಕ್ಕೆ ಚೈತ್ರಾ ಕುಂದಾಪುರ ಒಂದೋ ಪ್ರತಿಯಲ್ಲಿ ಬರಬೇಕು ಇಲ್ಲವೇ ಬಿಗ್ಬಾಸ್‌ ಅನೌನ್ಸ್ ಮಾಡಬೇಕು ಅಂದರು. ಇದು ಅಡುಗೆ ಮನೆಯಲ್ಲಿ ಯಮುನಾ ಮತ್ತು ಚೈತ್ರಾ ಮಧ್ಯೆ ದೊಡ್ಡ ಗಲಾಟೆಗೆ ಕಾರಣವಾಯ್ತು. ಎಷ್ಟು ಮಾತನಾಡಬೇಕು ಅಷ್ಟೇ ಮಾತನಾಡಿದರೆ ಒಳ್ಳೆಯದು ಎಂದು ಇಬ್ಬರ ನಡುವೆ ಗಲಾಟೆ ಆಯ್ತು. ನೀವು ತುಂಬಾ ಮಾತನಾಡುತ್ತೀರಿ ಎಂದು ಚೈತ್ರಾ ಎಂದು ಯಮುನಾ ಆರೋಪಿಸಿದರು. ನಾನು ಮಾತನಾಡಬಾರದು ಎಂದು ನೀವು ಹೇಳುವ ಹಾಗಿಲ್ಲ ಎಂದು ಚೈತ್ರ ಎದುರುತ್ತರ ನೀಡಿದರು. ಅಡುಗೆ ಮನೆಯಲ್ಲಿ ಕಾವು ಹೆಚ್ಚಾಯ್ತು. ಇತ್ತ ನರಕವಾಸಿಗಳ ಬಳಿ ಬಂದು ಜಗದೀಶ್ ನಗುತ್ತಿದ್ದರು.

ಮುಂದುವರೆದು ಮಂಜು ಕೈನಿಂದ ಚೈತ್ರಾ ಪೇರಳೆಯನ್ನು ಕಿತ್ತುಕೊಂಡು ತಿಂದು ನರಕಕ್ಕೆ ಬಿಸಾಡಿದ್ದು ಅಲ್ಲಿದ್ದವರೆಲ್ಲ ಆ ಹಣ್ಣನ್ನು ತಿಂದರು. ಇದು ಮತ್ತೆ ನಿಯಮ ಉಲ್ಲಂಘಿಸಿದ್ದೀರಿ ಎಂದು ಮನೆಯರ ವಾಗ್ವಾದಕ್ಕೆ ಕಾರಣವಾಯ್ತು. ಇದೇ ವಿಚಾರವಾಗಿ ಮತ್ತೆ ಯಮುನಾ ಮತ್ತು ಚೈತ್ರಾ ನಡುವೆ ಗಲಾಟೆ ನಡೆದು ಚೈತ್ರಾ ರೂಲ್ಸ್ ಬ್ರೇಕ್‌ ಮಾಡಿದ್ರೆ ಬಿಗ್‌ಬಾಸ್‌ ನನಗೆ ಶಿಕ್ಷೆ ನೀಡ್ತಾರೆ ನೀವು ಯಾರು ಎಂದು ವಾಗ್ವದ ನಡೆದು ಕೊನೆಗೆ ಯಮುನಾ ಕ್ಯಾಮರಾ ಮುಂದೆ ಬಂದು ಬಿಗ್‌ಬಾಸ್‌ ಶಿಕ್ಷೆ ನೀಡಿ ಎಂದು ಕೇಳಿಕೊಂಡರು.

ನರಕದಲ್ಲಿರುವ ಚೈತ್ರಾ ಕುಂದಾಪುರ ಅವರು ಟಾಯ್ಲೆಟ್​ ಕ್ಲೀನ್​ ಮಾಡಿದ್ದರು. ಆದರೆ ಅದು ಸರಿಯಾಗಿ ಕ್ಲೀನ್​ ಆಗಿಲ್ಲ ಎಂದು ಜಗದೀಶ್​ ಪುನಃ ಕ್ಲೀನ್​ ಮಾಡಿದರು. ಆದರೆ ಬಿಗ್​ಬಾಸ್​​ ನಿಯಮದ ಪ್ರಕಾರ ಇದು ತಪ್ಪು ಎಂದು ಇಡೀ ಮನೆ ಅವರ ಮೇಲೆ ಮುಗಿಬಿತ್ತು.

ಕೊನೆಗೆ ಧನ್ ರಾಜ್ ಮತ್ತು ಜಗದೀಶ್ ಮಧ್ಯೆ ವಾಗ್ವಾದ ನಡೆದು ಕೊನೆಗೆ ನೀವು ನಾಲ್ಕು ಜನ ಅಲ್ಲಿ ನಾಲ್ಕು ಜನ ಇಲ್ಲಿ ಕೂತುಕೊಂಡು ಮಾತನಾಡುತ್ತಿದ್ದೀರಿ. ನಾನು ಗೇಮ್ ಆಡಿದ್ರೆ ಚೆಕ್ ಮೇಟ್‌ ಆಡುದು. ಯಾವ ಅಟ್ಯಾಚ್‌ ಮೆಂಟ್ ಬೇಡ ನಾವು ಫೇರ್ ಗೇಮ್ ಆಡೋಣ ನಮ್ಮಲ್ಲಿ ಒಗ್ಗಟು ಇರಬೇಕು ಎಂದು ಕೊನೆಗೆ ಜಗದೀಶ್ ಹೇಳಿದರು. ಕೊನೆಗೆ ಎಲ್ಲರೂ ಕೂತು ನಾವು ಒಗ್ಗಟ್ಟಿನಲ್ಲಿ ಇರಬೇಕು ಎಂದು ನಿರ್ಧಾರ ಮಾಡಿದರು. ಈ ವೇಳೆ ಯುಮುನಾ ಅವರು ಚೈತ್ರಾ ಮೇಲೆ ಹರಾಸ್‌ಮೆಂಟ್‌ ಮಾಡಿದ್ದಾರೆಂದು ಜಗದೀಶ್ ಹೇಳಿದರು. ಆಗ ಇಡೀ ಮನೆ ಜಗದೀಶ್ ಮೇಲೆ ಮುಗಿಬಿತ್ತು.

 
ಬಿಗ್ ಬಾಸ್ ಕನ್ನಡ ಸೀಸನ್​ 11 (Bigg Boss Kannada 11) ಅಂದುಕೊಂಡಂತೆ ದೊಡ್ಡ ಹೈಪ್ ಕ್ರಿಯೇಟ್ ಮಾಡುತ್ತಿದೆ. ಮೊದಲ ದಿನವೇ ಸ್ಪರ್ಧಿಗಳ ನಡುವೆ ದೊಡ್ಡ ಮಟ್ಟಿನ ಮಾತಿನ ಚಕಮಕಿ ಏರ್ಪಟ್ಟಿದ್ದು, ನಾಮಿನೇಷನ್ ಪ್ರಕ್ರಿಯೆ ಕೂಡ ನಡೆದಿದೆ. ಸ್ವರ್ಗವಾಸಿಗಳು ನರಕದಲ್ಲಿರುವ ಜನರನ್ನು ನೇರವಾಗಿ ನಾಮಿನೇಟ್ ಮಾಡಬೇಕು ಎಂಬ ಆಜ್ಞೆ ಬಿಗ್ ಬಾಸ್ ನೀಡಿದ್ದರು. ಅದರಂತೆ ಸ್ವರ್ಗದಲ್ಲಿರುವ 10 ಜನರ ಪೈಕಿ 7 ಮಂದಿ ಚೈತ್ರಾ ಕುಂದಾಪುರ ಅವರನ್ನು ನಾಮಿನೇಟ್ ಮಾಡಿದ್ದಾರೆ. ಹೀಗಾಗಿ ಮೊದಲ ವಾರ ಮನೆಯಿಂದ ಹೊರಹೋಗಲು ಚೈತ್ರಾ ಅವರು ನೇರವಾಗಿ ಆಯ್ಕೆ ಆಗಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?