Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

 

ವಿಜಯವಾಡ : ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿ ಚಂದ್ರಬಾಬು ನಾಯ್ಡು ಅವರು, ʼಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ. ನಾವು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೆಲವು ಭಾಗಗಳನ್ನು ಮಾತ್ರವಲ್ಲ ಇಡೀ ರಾಜ್ಯದ ಏಳಿಗೆಗೆ ಕೊಡುಗೆ ನೀಡುತ್ತೇವೆ ಎಂದು ಅವರು ಭರವಸೆ ನೀಡಿದರು.

ಈ ಮೂಲಕ ನಿರ್ಗಮಿತ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು. ವೈಎಸ್‌ಆರ್‌ಸಿಪಿ ಮುಖಂಡ, ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರು ಈ ಹಿಂದೆ ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಅಭಿವೃದ್ಧಿಪಡಿಸುವುದಾಗಿ ಮತ್ತು ಅಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದರು. ಇದನ್ನು ಪ್ರಸ್ತಾವಿಸಿದ ಚಂದ್ರಬಾಬು ನಾಯ್ಡು, ವಿಶಾಖಪಟ್ಟಣಂನಲ್ಲಿ ವೈಎಸ್‌ಆರ್‌ಸಿಪಿಯನ್ನು ಸೋಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು. ಜಗನ್‌ ಮೋಹನ್‌ ರೆಡ್ಡಿ ಅವರು ಅಮರಾವತಿಯನ್ನು ಶಾಸಕಾಂಗ ರಾಜಧಾನಿಯಾಗಿ, ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಮತ್ತು ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ವಿಕೇಂದ್ರೀಕೃತ ಅಭಿವೃದ್ಧಿಯ ಕಲ್ಪನೆಯನ್ನು ಹುಟ್ಟು ಹಾಕಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು