Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚನ್ನರಾಜ ಹಟ್ಟಿಹೊಳಿ, ವಿಠ್ಠಲ ಹಲಗೇಕರ, ರಾಜು ಸಿದ್ದಾಣಿ ಈ ಮೂವರಲ್ಲಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲು ನಿರ್ಧಾರ

ಬೆಳಗಾವಿ : ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಖಾನಾಪುರ ತಾಲೂಕಿನಿಂದ ಈ ಸಲ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಖಾನಾಪುರ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಸಭೆಯಲ್ಲಿ ಯಶವಂತ ಬಿರ್ಜೆ ಅವರು ಈ ಬಗ್ಗೆ ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ವಿಠ್ಠಲ ಹಲಗೇಕರ ಮತ್ತು ರಾಜು ಸಿದ್ದಾಣಿ ಅವರಲ್ಲಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ವಿಶೇಷ ಆಯ್ಕೆ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಖಾನಾಪುರ ತಾಲೂಕಿನಲ್ಲಿ ಸಹಕಾರ ಕ್ಷೇತ್ರದಲ್ಲಿ ಹೊಸ ನಾಯಕತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಹಾಗೂ ಇತರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಪರಿಹಾರ ಕಂಡು ಹುಡುಕಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಇದೇ ರೀತಿ ಆಯ್ಕೆ ಸಮಿತಿ ರಚಿಸಿ ಕಳೆದ ಸಲ ಉತ್ತಮ ಸ್ಪರ್ಧೆ ನೀಡಿದ್ದೆವು. ಈ ಸಲ ನಾವು ಐದು ವರ್ಷಗಳಿಂದ ನಿರ್ದೇಶಕ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದೇವೆ. ತಾಲೂಕಿನ ಸಹಕಾರಿ ಸಂಘಗಳು ಹಲವು ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಾರಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.

ರಾಜು ಸಿದ್ಧಾಣಿ ಮಾತನಾಡಿ, ಕಳೆದ 20 ವರ್ಷಗಳಿಂದ ಖಾನಾಪುರ ತಾಲೂಕಿನ ಸಹಕಾರ ಸಂಘಗಳಲ್ಲಿ ಯಾವುದೇ ರೀತಿಯ ವಿಶೇಷ ಅಭಿವೃದ್ಧಿ ನಡೆದಿಲ್ಲ. ಕೆಲ ಸಂಘಗಳು ಚಟುವಟಿಕೆಗಳನ್ನು ನಿಲ್ಲಿಸಿದ್ದು ರೈತರು ಮತ್ತು ಸದಸ್ಯರಿಗೆ ಬಹಳ ನಷ್ಟವಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾಗುತ್ತಿದ್ದೇವೆ. ಈ ಬಗ್ಗೆ ಎಲ್ಲರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದೇವೆ ಎಂದು ತಿಳಿಸಿದರು.
ಚನ್ನರಾಜ ಹಟ್ಟಿಹೊಳಿ ಮಾತನಾಡಿ ಈ ಸಲದ ಚುನಾವಣೆಯಲ್ಲಿ ಖಾನಾಪುರ ತಾಲೂಕಿನ ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಯಾವ ಸಂದೇಹವು ಇಲ್ಲ ಎಂದು ತಿಳಿಸಿದರು.
ಶಿವಸೇನೆ ಮುಖ್ಯಸ್ಥ ಕೆ.ಪಿ. ಪಾಟೀಲ, ಬರಮಾಣಿ ಪಾಟೀಲ, ಶ್ರೀಶೈಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು