Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಬಿಗ್ ಶಾಕ್ ನೀಡಿದ ಸಿಎಂ

ಮೈಸೂರು : ಸುಳ್ಳಿನ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.

ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ.

ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, "ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. " ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ" ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

*ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು