Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಣ್ಯಗಳು ನಾಡಿನ ಚಾರಿತ್ರಿಕ ಕುರುಹು: ಪ್ರೊ. ಎಂ. ಜಿ. ಹೆಗಡೆ

ಬೆಳಗಾವಿ : ನಾಣ್ಯಗಳು ಇತಿಹಾಸದ ಪ್ರಮುಖ ಪುರಾತತ್ವ ಮೂಲವಾಗಿದೆ. ಅವು ಭಾಷೆ, ಆಡಳಿತ, ಧರ್ಮ, ಆರ್ಥಿಕತೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ ಎಂದು ಪ್ರಾಚಾರ್ಯ ಪ್ರೊ ಎಂ. ಜಿ. ಹೆಗಡೆ ಅಭಿಪ್ರಾಯಪಟ್ಟರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಇತಿಹಾಸ ವಿಭಾಗವು ಐ.ಕ್ಯೂ.ಎ.ಸಿ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಮಾ. ೨೮ರಂದು ಆಯೋಜಿಸಿದ್ದ ನಾಣ್ಯಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ನಾಣ್ಯಗಳು ಇತಿಹಾಸ ರಚನೆಯಲ್ಲಿ ಬಹು ಮುಖ್ಯ ಪಾತ್ರವಹಿಸಿದೆ. ನಾಣ್ಯಗಳಿಂದ ಒಂದು ನಾಡಿನ ವ್ಯವಹಾರದ ದಿಕ್ಕುದೆಸೆಗಳನ್ನು ಅರಿಯಲು ಸಾಧ್ಯವಾಯಿತು. ಪ್ರಾಚೀನ ಕಾಲದಲ್ಲಿ ನಾಣ್ಯಗಳನ್ನು ಪರಿಚಯಿಸುವ ಮೊದಲು ವಸ್ತು ವಿನಿಮಯ ವ್ಯವಸ್ಥೆ ಇತ್ತು. ನಾಣ್ಯಗಳ ಪರಿಚಯದಿಂದ ಆರ್ಥಿಕ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯಾಯಿತು. ಅಭಿವೃದ್ಧಿಯಲ್ಲಿ ಹೊಸ ಶಕೆ ಆರಂಭವಾಯಿತು. ನಾಡಿನ ಸಾಂಸ್ಕೃತಿಕ ಚಹರೆಗಳನ್ನು ಅರಿಯಲು ನಾಣ್ಯಗಳು ಪ್ರಮುಖವಾದುದು. ವಿದ್ಯಾರ್ಥಿಗಳು ಈ ಪ್ರದರ್ಶನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸದಾಶಿವ ಮುಗಳಿ ಅವರು ದೇಶ-ವಿದೇಶಗಳ ಪ್ರಾಚೀನ ಮತ್ತು ಅರ್ವಾಚೀನ ಕಾಲದ ನಾಣ್ಯಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಇವುಗಳನ್ನು ಅಂತರ್ಜಾಲದಲ್ಲಿ ನೋಡಬಹುದು ವಿನಃ ಪ್ರತ್ಯಕ್ಷವಾಗಿ ನೋಡಲು ಸಿಗುವುದು ಬಹು ಅಪರೂಪ. ಇಲ್ಲಿ ಒಟ್ಟೂ 110 ವಿವಿಧ ರಾಜಮನೆತನಗಳ ನಾಣ್ಯಗಳು ಮತ್ತು 224 ದೇಶದ ನೋಟುಗಳಿವೆ. ಅವು ಕ್ರಿಸ್ತ ಪೂರ್ವದಿಂದ ಇಲ್ಲಿಯವರೆಗಿನಗಳಾಗಿವೆ ಎಂದರು.

ಇತಿಹಾಸ ಉಪನ್ಯಾಸಕಿ ಡಾ. ನೂತನ ದೇಸಾಯಿ ಸ್ವಾಗತಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ನಾಣ್ಯಗಳ ಪ್ರದರ್ಶನವನ್ನು ವೀಕ್ಷಿಸಿದರು. ಭಾಗ್ಯಶ್ರೀ ಹೊನ್ನಕ್ಕನವರ್ ನಿರೂಪಿಸಿದರು.
ಸಿದ್ಧಾರೂಢ ಮೇತ್ರಿ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ