Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಂಗಸೃಷ್ಟಿಯಿಂದ ಏ.28ರಂದು “ಸೆಕೆಂಡ್ ಹ್ಯಾಂಡ್ ಸದಾಶಿವ” ಹಾಸ್ಯ ನಾಟಕ

ಬೆಳಗಾವಿ: ರಂಗಭೂಮಿ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ನಿಟ್ಟಿನಲ್ಲಿ ಬೆಳಗಾವಿಯ ರಂಗಸೃಷ್ಟಿ ಸಾಂಸ್ಕೃತಿಕ ಸಂಘ (ರಿ.)ದಿಂದ ಏಪ್ರಿಲ್ 28ರಂದು ಹಾಸ್ಯ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.

“ಸೆಕೆಂಡ್ ಹ್ಯಾಂಡ್ ಸದಾಶಿವ” ಎಂಬ ಜನಪ್ರಿಯ ಹಾಸ್ಯ ನಾಟಕವನ್ನು ಏಪ್ರಿಲ್ 28ರಂದು, ಸಂಜೆ 6.30ಕ್ಕೆ ಕನ್ನಡ ಭವನ (ರಾಮದೇವ ಹೋಟೆಲ್ ಹತ್ತಿರ)ದಲ್ಲಿ ಪ್ರದರ್ಶಿಸಲಾಗುತ್ತಿದೆ.

 ಎಂ. ಎಸ್. ನರಸಿಂಹಮೂರ್ತಿ ರಚಿಸಿರುವ ಈ ನಾಟಕವನ್ನು ಶರಣಗೌಡ ಪಾಟೀಲ ಅವರು ನಿರ್ದೇಶಿಸಿದ್ದಲ್ಲದೆ, ಸಂಗೀತನಿರ್ದೇಶನ, ರಂಗವಿನ್ಯಾಸ ಮತ್ತು ಬೆಳಕಿನ ವಿನ್ಯಾಸವನ್ನೂ ಮಾಡಲಿದ್ದಾರೆ. ಉದ್ಘಾಟನೆಯನ್ನು ಲೋಕೋಪಯೋಗಿ ಇಲಾಖೆ ಕಾಯನಿರ್ವಾಹಕ ಇಂಜಿನಿಯರ್ ಪ್ರವೀಣ ಹುಲಜಿ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸಮಾಜ ಸೇವಕರಾದ ಬಸವರಾಜ ಕಾಮಗಾರಕರ ಹಾಗೂ ಆಕ್ಮೆ ಇಂಜಿನಿಯರಿಂಗ್ ವರ್ಕ್ಸ್‌ನ ಪುಂಡಲೀಕ್ ಅವರು ಭಾಗವಹಿಸಲಿದ್ದಾರೆ. ಇದೇ ವೇಳೆ ರಂಗಾಯಣದ ನಿರ್ದೇಶಕ ಝಾಕೀರ್ ನದಾಫ್ ಅವರನ್ನು ಸನ್ಮಾನಿಸಲಾಗುವುದು. ಅಧ್ಯಕ್ಷತೆಯನ್ನು ರಂಗಸೃಷ್ಟಿ ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ರಮೇಶ ಜಂಗಲ್ ವಹಿಸಲಿದ್ದಾರೆ.

ಈ ಹಾಸ್ಯ ನಾಟಕವು ಕುಟುಂಬ ಮೌಲ್ಯಗಳು, ಸಾಮಾಜಿಕ ಪರಿಸ್ಥಿತಿಗಳು ಹಾಗೂ ಮನರಂಜನೆಯನ್ನು ಒಳಗೊಂಡ ಕಥಾವಸ್ತುವಿನ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಲಿದ್ದು, ಸ್ಥಳೀಯ ಕಲಾವಿದರಾದ ವಾಮನ ಮಳಗಿ, ಶಾಂತಾ ಆಚಾರ್ಯ, ಶಿರೀಶ್ ಜೋಶಿ, ವಿಶ್ವನಾಥ ದೇಸಾಯಿ, ಅನುಶ್ರೀ ರಘುವೀರ, ಶರಣಯ್ಯ ಮಠಪತಿ ಅಭಿನಯ ವಿಶೇಷ ಆಕರ್ಷಣೆಯಾಗಲಿದೆ. ನಾರಾಯಣ ಗಣಾಚಾರಿ ತಬಲಾ ಸಾಥ್ ನೀಡಲಿದ್ದಾರೆ. ಕನ್ನಡ ಭವನ ಕಾರ್ಯಕ್ರಮಕ್ಕೆ ಸಹಯೋಗ ನೀಡಿದೆ. 

ಉಚಿತ ಪ್ರದಸ್ಱನವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕವನ್ನು ಆಸ್ವಾದಿಸುವಂತೆ ರಂಗಸೃಷ್ಟಿಯ ಉಪಾಧ್ಯರಾದ ಎಂ.ಕೆ.ಹೆಗಡೆ ಮತ್ತು ಶೈಲಜಾ ಭಿಂಗೆ, ಕನ್ನಡಭವನದ ಕಾರ್ಯದರ್ಶಿ ಯ.ರು.ಪಾಟೀಲ ಹಾಗೂ ಎರಡೂ ಸಂಘಟನೆಗಳ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?