Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ಆರಂಭಿಕ ಮುನ್ನಡೆ

ನವದೆಹಲಿ: ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಆರಂಭವಾಗಿದ್ದು, ಹರಿಯಾನದಲ್ಲಿ ಕಾಂಗ್ರೆಸ್ 62, ಬಿಜೆಪಿ 24, ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ 18, ಕಾಂಗ್ರೆಸ್ 12 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿವೆ.

ಈ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗಳಿಗೆ ದಿಕ್ಕೂಚಿಯಾಗುವ ಸಾಧ್ಯತೆ ಇದೆ.

ಹರಿಯಾಣದಲ್ಲಿ ದಶಕದ ಬಳಿಕ ಅಧಿಕಾರದ ಗದ್ದುಗೆ ಏರುವ ಆಸೆಯಲ್ಲಿ ಕಾಂಗ್ರೆಸ್ ಪಾಳಯ ಇದೆ. ಕಮಲ ಪಾಳಯವು ಸತತ ಮೂರನೇ ಅವಧಿಗೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದು, ಸರ್ಕಾರ ರಚನೆಯ ಭರವಸೆಯಲ್ಲಿವೆ. ರಾಜ್ಯದಲ್ಲಿ ದಶಕದ ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ತನ್ನ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಆದರೆ, ಕಾಂಗ್ರೆಸ್‌-ನ್ಯಾಷನಲ್ ಕಾನ್ನರೆನ್ಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

ತಾಜಾ ಮಾಹಿತಿ ಕಮಲ ಕಿಲಕಿಲ...

ತಾಜಾ ಮಾಹಿತಿಯ ಪ್ರಕಾರ ಹರಿಯಾಣದಲ್ಲಿ ಬಿಜೆಪಿ ಇದೀಗ ಆರಂಭಿಕ ಹಿನ್ನಡೆ ನಡುವೆ ಮತ್ತೆ ಪುಟಿದೆದ್ದಿದೆ. ಬಿಜೆಪಿ 44 ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಈವರೆಗೆ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಇದೇ ರೀತಿ ಮುನ್ನಡೆ ಸಾಧಿಸಿದರೆ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು