Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಲೆಯೇರಿಕೆ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

 

ಬೆಳಗಾವಿ : ಕೇಂದ್ರ ಸರ್ಕಾರ ಅಡುಗೆ ಅನಿಲ, ತೈಲ ದರವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್‍ನ ಪದಾಧಿಕಾರಿಗಳು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ ನೇತೃತ್ವದಲ್ಲಿ ಶುಕ್ರವಾರ 11 ರಂದು ನಗರದ ಕಾಂಗ್ರೆಸ್‌ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ದಾರಿಯುದ್ದಕ್ಕೂ ಕೇಂದ್ರ ಸರ್ಕಾರದ ಧೋರಣೆ, ಬೆಲೆ ಏರಿಕೆಯ ವಿರುದ್ದ ಹಾಗೂ ಭಿತ್ತಿ ಪತ್ರ ಹಿಡಿದು ಮೋದಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ, ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್‍ನ ಅಬಕಾರಿ ಸುಂಕವನ್ನು ರೂ.2 ಹೆಚ್ಚಳ ಮಾಡುವುದರ ಮೂಲಕ ಬಡವರ ಬದುಕಿಗೆ ಕೊಳ್ಳಿ ಇಟ್ಟಿದೆ ಎಂದು ದೂರಿದರು.

ತೈಲ ದರ ಏರಿಕೆಯಿಂದಾಗಿ ಬೇರೆ ಎಲ್ಲ ದರಗಳು ಸಹಾ ಏರಿಕೆಯಾಗುತ್ತವೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರು ಬದುಕು ಕಷ್ಟಕ್ಕೆ ದೂಡುತ್ತದೆ. ಕೇಂದ್ರ ಸರ್ಕಾರ ಈ ಕೂಡಲೇ ಏರಿಕೆ ಮಾಡಿರುವ ಪೆಟ್ರೋಲ್ ಡಿಸೇಲ್‍ನ ಅಬಕಾರಿ ಸುಂಕದ ದರವನ್ನು ಇಳಿಕೆ ಮಾಡಬೇಕು. ಈ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಹಾಗೂ ನಿರುದ್ಯೋಗ ಹೆಚ್ಚಾಗುತ್ತದೆ ಎಂದು ಆರೋಪಿಸಿದರು.

ಯುವಕರು ಕೇಂದ್ರ ಸರ್ಕಾರದ ಜನ ವಿರೋಧಿ ನಡೆಯನ್ನು ಖಂಡಿಸಬೇಕು. ಜನರಿಗೆ ನಾಯ್ಯ ಕೊಡಿಸುವ ಕೆಲಸವನ್ನು ಮಾಡಬೇಕೆಂದು ಇದೇ ವೇಳೆ ರಾಹುಲ್‌ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಘಟಕದ ಸದಸ್ಯರಿಗೆ ಸಲಹೆ ನೀಡಿದರು.

ಶಾಸಕ ರಾಜು (ಆಸೀಪ್‌)ಸೇಠ ಮಾತನಾಡಿ ಅವರು, ದುರ್ಬಲ ವರ್ಗದವರು ಬೆಲೆ ಏರಿಕೆಯ ಹೊರೆಯನ್ನು ಹೊರುತ್ತಿದ್ದಾರೆ ಮತ್ತು ಇದು ಬಡವರ ವಿರೋಧಿ ಮಾತ್ರವಲ್ಲದೆ ಜನ ವಿರೋಧಿಯೂ ಆಗಿದೆ ಮತ್ತು ಆದ್ದರಿಂದ ಇದನ್ನು ವಿರೋಧಿಸಿ ಪ್ರತಿಭಟನೆ ಅಗತ್ಯ ಕೇಂದ್ರ ಸರ್ಕಾರ ಜನರ ಕಷ್ಟಗಳಿಗೆ ಧ್ವನಿಯಾಗಬೇಕು ಎಂದು ಹೇಳಿದರು.

ಬೆಳಗಾವಿ ಗ್ರಾಮೀಣ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತೀಕ್‌ ಪಾಟೀಲ್ ಪಾಟೀಲ್ ಮಾತನಾಡಿ, ಬಿಜೆಪಿ ಆಡಳಿತ ಅವಧಿಯಲ್ಲಿ ಎಲ್ಲಾ ಬೆಲೆಗಳು ಏರಿಕೆ ಕಂಡಿವೆ. ಸಧ್ಯಕ್ಕೆ ಅಡುಗೆ ಅನಿಲ್‌ ಏರಿಸಿ ಬಡರಿಗೆ ಬರೆಯ ಬರೆ ಎಳೆದಿದೆ. ಈ ದೇಶದಲ್ಲಿ ಕೋಟ್ಯಾಂತರ ಜನರು ಮಧ್ಯಮ ವರ್ಗದವರು ಸರ್ಕಾರ ಅವರ ಸ್ಥಿತಿಗತಿಯನ್ನು ಅರಿತುಕೊಂಡು ಬೆಲೆ ಏರಿಕೆ ಮಾಡಬೇಕಿದೆ. ಎಲ್ಲವನ್ನು ಬಡಜನರು ಬೀದಿಗೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ತೈಲ ಬೆಲೆ ಸೇರಿದಂತೆ ಅಡುಗೆ ಅನಿಲ್‌ ಬೆಲೆಯನ್ನು ಶೀಘ್ರವೇ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ , ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ. ಜೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಯುವ ಕಾಂಗ್ರೆಸ್ ಜಿಲಾಧ್ಯಕ್ಷ ಕಾರ್ತೀಕ್‌ ಪಾಟೀಲ್, ರಾಮ ಗುಲ್ಲಿ ಚಿಕ್ಕೋಡಿ ಜಿಲ್ಲಾ ಎಸ್ಟಿ ಕಾಂಗ್ರೆಸ್ ಅಧ್ಯಕ್ಷ̧ ಅನಿಕೇತ್ ಪಟ್ಟನ್ ಪರಶುರಾಮ ಡಗೆ, ಜಿಪಂ ಸದಸ್ಯ ಮಹಾಂತೇಶ್ ಮಗದುಮ್ಮ, ಯುವ ಕಾಂಗ್ರೆಸ್
ನಾಯಕ ಸಿದ್ದಿಕ್ ಅಂಕಲಗಿ, ರಾಜಾ ಸಲೀಮ್, ಜಿಲ್ಲಾ ಕಾಂಗ್ರೆಸ್ ಯುವ ಸಮಿತಿಯ ಸಾಗರ್ ದಿವಟಗಿ, ಅಕೀಬ್ ಬೇಪಾರಿ, ರಫೀಕ್ ಬನದರ್, ಗೌಸ್ ಗೌಂಡಿ, ಹನುಮಾನ್ ಮುಕಾಶಿ , ಶಾಬಾಜ್ ಮುಜಾವರ್, ಸೈಫ್ ಅಲಿ ಬೇಪಾರಿ, ಜೋಹೈಬ್ ಸಿದ್ಧಿಕಿ, ಅಹ್ಮದ್ ಮಜಗಾಂವಕರ್, ಜುನೇದ್ ಪೀರಜಾದೆ ,ಶ್ಲೋಕ್ ಕಡೋಲಕರ, ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ಸೇರಿದಂತೆ ಸಾವಿರಾರು ಕಾರ್ಯಕರ್ತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು