Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದರ್ಶನ್ ಪ್ರಕರಣ :  ಶವ ಸಾಗಿಸಲು 30 ಲಕ್ಷ ರೂ. ಡೀಲ್

 

ಬೆಂಗಳೂರು: ನಟ ದರ್ಶನ್ ಸ್ನೇಹಿತೆ ಆಗಿರುವ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಕರೆಸಿ ಹಲ್ಲೆ ಮಾಡಿ ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಈ ಕೇಸ್‌ನಲ್ಲಿ ನಟ ದರ್ಶನ್ ಸೇರಿ 13 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ. ಈ ಪ್ರಕರಣದ ಕುರಿತಾಗಿ ಒಂದೊಂದೆ ವಿಚಾರಗಳು ತನಿಖೆಯಿಂದ ಹೊರ ಬರುತ್ತಿವೆ ಎನ್ನಲಾಗಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್‌ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ದರ್ಶನ್‌ಗಿಂತ ನಾನೇನು ಕಡಿಮೆ ಬಾ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದ ಪವನ್‌ಗೆ ಹೇಳಿದ್ದರು. ಈ ವಿಚಾರ ದರ್ಶನ್‌ಗೆ ತಿಳಿದಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್‌ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ