Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಅವರು “ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂರನೇ ಅತಿದೊಡ್ಡ ನಿಲ್ದಾಣವಾಗಿದೆ. ಮುಂಬೈ, ದೆಹಲಿ ಬಿಟ್ಟರೇ ದಕ್ಷಿಣ ಭಾರತದಲ್ಲೇ ದೊಡ್ಡ ನಿಲ್ದಾಣವಾಗಿದ್ದು 70 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ 110 ಮಿಲಿಯನ್ ಗೆ ತಲುಪುತ್ತದೆ ಎಂದು ಅಂದಾಜಿಸಲಾಗಿದೆ” ಎಂದರು.

ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣವನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಹೊಸ ನಿಲ್ದಾಣವನ್ನು ಇದೇ ರೀತಿ ನಿರ್ಮಾಣ ಮಾಡಲಾಗುವುದು. ಇದರಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ಪಾಲೂ ಇರುತ್ತದೆ. ಮೂಲಸೌಕರ್ಯ ವ್ಯವಸ್ಥೆ ನೋಡಿ ಜಾಗಕ್ಕೆ ಹಸಿರು ನಿಶಾನೆ ನೀಡಲಾಗುತ್ತದೆ. ಸಚಿವರಾದ ಎಂ.ಬಿ.ಪಾಟೀಲರು ಅತ್ಯಂತ ಅಚ್ಚುಕಟ್ಟಾಗಿ ಯೋಜನೆ ಸಿದ್ದಪಡಿಸಿಕೊಂಡಿದ್ದಾರೆ. ತಾಂತ್ರಿಕ ವರದಿಗಳು ಸಹ ಬಂದಿದ್ದು ಇವುಗಳನ್ನು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗುವುದು. ನಂತರ ದೆಹಲಿಗೆ ಕಳುಹಿಸಲಾಗುವುದು” ಎಂದು ಹೇಳಿದರು.

ಅಂತಿಮವಾಗಿ ಕೇಂದ್ರ ಸರ್ಕಾರವೇ ಅನುಮತಿ ನೀಡಬೇಕು. ಕೇಂದ್ರ ತಂಡ ಸಾಧಕ- ಭಾದಕಗಳನ್ನು ಗಮನಿಸಿ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಯಾವ ಜಾಗದಲ್ಲಿ ವಿಮಾನ ನಿಲ್ದಾಣ ಬಂದರೆ ಒಳ್ಳೆಯದು, ಬೆಂಗಳೂರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ನೋಡಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಭಾಗದಲ್ಲಿ ವಿಮಾನ ನಿಲ್ಧಾಣ ಬರುತ್ತದೆಯೇ ಎಂದಾಗ “ಇದು ಕರ್ನಾಟಕಕ್ಕೆ ಅನುಕೂಲವಾಗಲು ಮಾಡುತ್ತಿರುವುದು. ನಿಮ್ಮ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ” ಎಂದು ತಿಳಿಸಿದರು.

ವಿಮಾನ ನಿಲ್ದಾಣ ನಿರ್ಮಾಣದ ಕಾಲಾವಧಿಯ ಬಗ್ಗೆ ಕೇಳಿದಾಗ “ಕೇಂದ್ರದಿಂದ ಅನುಮತಿ ನೀಡಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು. 2035 ರ ವೇಳೆಗೆ ಕಾರ್ಯಾಚರಣೆ ಮಾಡುವಂತೆ ನಿರ್ಮಾಣ ಮಾಡಲಾಗುವುದು. ಈ ಮೊದಲು ಎಚ್ ಎಎಲ್ ಹಾಗೂ ಮೈಸೂರಿನಲ್ಲಿ ನಿರ್ಮಾಣ ಮಾಡಲು ಅವಕಾಶ ನೀಡಲಿಲ್ಲ. ಸಮಯಕ್ಕಾಗಿ ಕಾಯುತ್ತಿದ್ದೆವು. ಬೇರೆ ರಾಜ್ಯಗಳು ಈ ಸಂದರ್ಭವನ್ನು ಬಳಸಿಕೊಳ್ಳಬಾರದು ಎಂದು ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ” ಎಂದರು.

150 ಕಿ.ಮೀ ವ್ಯಾಪ್ತಿಯಲ್ಲಿ ಎರಡೆರಡು ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಬಾರದು ಎನ್ನುವ ನಿಯಮವಿತ್ತು. ಈ ನಿಯಮ 2032- 33 ಕ್ಕೆ ಮುಗಿಯಲಿದೆ. ಪ್ರಸ್ತುತ ಎರಡು ರನ್ ವೇಗಳನ್ನು 4 ಸಾವಿರ ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ನಿರ್ಮಾಣ ಮಾಡಲಾಗಿತ್ತು. ಎರಡು ರನ್ ವೇ ಗಳು ಭವಿಷ್ಯದಲ್ಲಿ ಸಾಲುವುದಿಲ್ಲ. ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಈ ಕಾರಣಕ್ಕೆ ಕೇವಲ ಒಂದು ವಿಮಾನ ನಿಲ್ದಾಣ ಸಾಕಾಗುವುದಿಲ್ಲ. ಸಚಿವರಾದ ಎಂಬಿ.ಪಾಟೀಲ್ ಅವರ ನೇತೃತ್ವದಲ್ಲಿ ಹತ್ತಾರು ಸಭೆಗಳು ನಡೆಸಲಾಗಿದೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಂದಷ್ಟು ನಿಯಮಗಳಿಗೆ ಆದ ಕಾರಣಕ್ಕೆ ಈಗಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಆಸ್ತಿ ಚರ್ಚೆಗೆ ಕುಮಾರಸ್ವಾಮಿಯೇ ಮಹೂರ್ತ ನಿಗದಿ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು/ ಮದ್ದೂರು :
“ಆಸ್ತಿ ವಿಚಾರವಾಗಿ ಚರ್ಚೆ ನಡೆಸಲು ಕುಮಾರಸ್ವಾಮಿ ಶುಭ ಘಳಿಗೆ ಹುಡುಕಿ ತಡ ಮಾಡದೆ ಶುಭ ಮುಹೂರ್ತ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯ ನಂತರ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಅವರು “ಕಳೆದ 20 ವರ್ಷಗಳಿಂದ ನನ್ನ ಮೇಲೆ ಕುತಂತ್ರ ಮಾಡುತ್ತಲೇ ಇದ್ದಾರೆ. ಇಡಿ, ಸಿಬಿಐ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳು ನನ್ನ ಜಾಲಾಡುತ್ತಿವೆ. ಇವರೂ ಅದನ್ನೇ ತೆಗೆದುಕೊಂಡು ಮಾತನಾಡುತ್ತಿದ್ದಾರೆ, ಮಾತನಾಡಲಿ. ನಾನು ತೆರೆದ ಪುಸ್ತಕ” ಎಂದರು.

“ಕುಮಾರಸ್ವಾಮಿ ಅವರ ಸವಾಲನ್ನು ಸ್ವೀಕರಿಸಿ ವಿಧಾನಸಭೆ ಅಥವಾ ಚಾಮುಂಡಿ ಬೆಟ್ಟ ಎಲ್ಲಿಗೆ ಬರುವಿರಾ ಎಂದು ಕೇಳಿದಾಗ “ವಿಧಾಸಭೆಗೆ ಬರಲಿ. ಆದರೆ ಅವರು ಅಲ್ಲಿಗೆ ಬರಲು ಆಗುವುದಿಲ್ಲ. ಅವರ ಬದಲು ಅಣ್ಣನನ್ನು ಕಳುಹಿಸಲಿ. ಎಲ್ಲಾ ಮಾಧ್ಯಮಗಳು ಬರಲಿ” ಎಂದು ಮರು ಸವಾಲು ಹಾಕಿದರು.

ಮೈಸೂರು ಚಲೋ ಪಾದಯಾತ್ರೆ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಎನ್ನುವಂತೆ ಆಗಿದೆ ಎಂದು ಕೇಳಿದಾಗ “ನನಗೆ ಈ ಪಾದಯಾತ್ರೆಯ ಮೂಲಕ ಅವರುಗಳು ವರ ಕೊಟ್ಟಿದ್ದಾರೆ. ಅವರ ಪಾದಯಾತ್ರೆಯಿಂದಾಗಿ ಅವರ ಅಸೂಯೆ, ಅಕ್ರಮಗಳನ್ನು ಜನರ ಮುಂದಿಡಲು ಅವಕಾಶ ಮಾಡಿಕೊಟ್ಟರು” ಎಂದರು.

ದಲಿತ ಕುಟುಂಬವನ್ನು ಹಾಳು ಮಾಡಿದ್ದೀರಿ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಅದು ಯಾವ ದಲಿತ ಕುಟುಂಬವನ್ನು ಹಾಳು ಮಾಡಿದ್ದೇನೆಯೋ ಅವರನ್ನು ಕರೆತಂದು ಎದುರಿಗೆ ನಿಲ್ಲಿಸಲಿ. ಇವನು ಕೂಡ ಮಂತ್ರಿ, ಸಿಎಂ ಆಗಿದ್ದನಲ್ಲ ಆಗ ತನಿಖೆ ಮಾಡಿಸಬೇಕಿತ್ತು” ಎಂದರು.

ಬಿಜೆಪಿ, ಜೆಡಿಎಸ್ ಗೆ ಡಿ.ಕೆ.ಶಿವಕುಮಾರ್ ಅವರು ಮಾತ್ರ ಗುರಿಯಾಗುತ್ತಿದ್ದಾರೆ ಎಂದಾಗ “ಅವರಿಗೂ ಅದೇ ಬೇಕು. ಅದಕ್ಕೆ ನಾನು ಸಹ ಸುಮ್ಮನಿದ್ದೇನೆ. ಇದು ನಿಮಗೆ (ಮಾಧ್ಯಮದವರಿಗೆ) ಅರ್ಥವಾಗಬೇಕಲ್ಲವೇ? ಇದರಿಂದ ಮುಡಾ ಹಗರಣ ಎಂಬುದು ಸುಳ್ಳು ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕೆ?” ಎಂದರು.

ಪಾದಯಾತ್ರೆ ವೇಳೆ ಮಾಧ್ಯಮದವರ ಮೇಲಿನ ಹಲ್ಲೆ ವಿಚಾರವಾಗಿ ಕೇಳಿದಾಗ “ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ನಾಲ್ಕನೇ ಅಂಗ. ಮಾಧ್ಯಮದವರಿಗೆ ಗೌರವ ನೀಡಬೇಕು. ನಮ್ಮ ಆಚಾರ, ವಿಚಾರಗಳನ್ನು ನೀವು ತಿಳಿಸದೇ ಹೋದರೆ ನಾವುಗಳು ರಾಜಕಾರಣಿಗಳೇ ಆಗುವುದಿಲ್ಲ ಎಂದರು. ಹಲ್ಲೆ ನಡೆಸಿದವರ ಮೇಲೆ ಕ್ರಮ ತೆಗೆದುಕೊಳ್ಳುವಿರಾ ಎಂದು ಮರು ಪ್ರಶ್ನಿಸಿದಾಗ “ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲದಕ್ಕಿಂತ ಮುಖ್ಯವಾಗಿ ನೀವು ಆ ಪಕ್ಷವನ್ನು ನಿಷೇಧ ಮಾಡಬೇಕು” ಎಂದರು.

ಸರ್ಕಾರ ಬೀಳಲಿದೆ, ಮುಖ್ಯಮಂತ್ರಿಗಳು ರಾಜಿನಾಮೆ ನೀಡುತ್ತಾರೆ ಎಂದು ಕೇಳಿದಾಗ “ಬಿಜೆಪಿಯವರಿಗೆ ಅಸೂಯೆ. ಅಸೂಹೆಗೆ ಮದ್ದಿಲ್ಲ. ಜೊತೆಗೆ ಹಿಂದುಳಿದ ವರ್ಗದ ವ್ಯಕ್ತಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ ಎನ್ನುವ ಹೊಟ್ಟೆಕಿಚ್ಚು. ಅಲ್ಲದೇ ನಾವು ನೀಡಿರುವ ಐದು ಗ್ಯಾರಂಟಿಗಳನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳು ಅನುಕರಿಸುತ್ತಿವೆ. ಇದರಿಂದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ತಲೆಬಿಸಿಯಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ವಾತಾವರಣ ಸೃಷ್ಟಿಸುತ್ತಿದೆ. ಜನರಲ್ಲಿ ಗೊಂದಲ ಉಂಟುಮಾಡುತ್ತಿದೆ” ಎಂದರು.

*ಕುಮಾರಸ್ವಾಮಿ ಬ್ಲಾಕ್ ಮೇಲ್ ರಾಜಕಾರಣಿ*

ಡಿ.ಕೆ.ಶಿವಕುಮಾರ್ ಹೆದರಿಸಿ ಬೆದರಿಸಿ ಆಸ್ತಿ ಗಳಿಕೆ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಕುಮಾರಸ್ವಾಮಿ ಬ್ಲಾಕ್ ಮೇಲ್ ರಾಜಕಾರಣಿ. ಪಾದಯಾತ್ರೆಗೆ ಜೆಡಿಎಸ್ ಬರುವುದಿಲ್ಲ ಎಂದು ಬಿಜೆಪಿಗೆ ಬೆದರಿಸಿದರು. ನಂತರ ಜೊತೆಯಲ್ಲಿ ಹೋದರು. ನನ್ನ ಮೇಲೆ ಆರೋಪ ಮಾಡುತ್ತಿರುವ ಅವರಿಗೆ ಧನ್ಯವಾದಗಳು” ಎಂದು ವ್ಯಂಗ್ಯವಾಡಿದರು.

ವಾಲ್ಮೀಕಿ ನಿಗಮದ ಹಗರಣವನ್ನು ಹೈಕಮಾಂಡಿಗೆ ಕಳುಹಿಸಲಾಗಿದೆ ಎನ್ನುವ ವಿಜಯೇಂದ್ರ ಅವರ ಆರೋಪದ ಬಗ್ಗೆ ಕೇಳಿದಾಗ “ಅವರ ತಂದೆ ರಾಜಿನಾಮೆಗೆ ಕಾರಣನಾದ ವ್ಯಕ್ತಿ ಆತ.
ಮೊದಲ ಬಾರಿಗೆ ಶಾಸಕರಾಗಿ, ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಅದನ್ನು ಖುಷಿಯಾಗಿ ಅನುಭವಿಸಲಿ” ಎಂದರು.

ಜನಾಂದೋಲನ ಯಾತ್ರೆಯನ್ನು ಬಿಜೆಪಿ ಪಶ್ಚತ್ತಾಪ ಯಾತ್ರೆ ಎಂದು ಕರೆದಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ “ಅವರದ್ದು ನಿಜವಾದ ಪಶ್ಚತ್ತಾಪ ಯಾತ್ರೆ. ಕರ್ನಾಟಕದ ಹೆಸರು ಹಾಳು ಮಾಡಿದರು. ಭ್ರಷ್ಟರಾಜ್ಯವೆಂದು ಕೆಟ್ಟ ಹೆಸರು ತಂದರು. ನಾವೀಗ ಅದನ್ನು ಶುದ್ದೀಕರಣ ಮಾಡುತ್ತಿದ್ದೇವೆ” ಎಂದು ಹೇಳಿದರು.

ರಾಜ್ಯಪಾಲರ ತೀರ್ಮಾನ ಹಾಗೂ ಅವರ ಮುಂದಿನ ನಡೆ ಬಗ್ಗೆ ಕೇಳಿದಾಗ “ನೆಲದ ಕಾನೂನಿಗೆ ರಾಜ್ಯಪಾಲರು ಗೌರವ ನೀಡುತ್ತಾರೆ ಎಂದು ಭಾವಿಸಿರುವೆ. ಸಿಎಂ ಅವರಿಗೆ ನೋಟಿಸ್ ನೀಡುವ ಕೆಲಸಕ್ಕೆ ಕೈ ಹಾಕುವುದಿಲ್ಲ ಎಂದು ಭಾವಿಸಿರುವೆ. ರಾಜ್ಯಪಾಲರು ನಮ್ಮ ಸಲಹೆ ಕೇಳುತ್ತಾರೆ ಎಂದು ಭಾವಿಸಿದ್ದೇವೆ. ಇದಾಗದಿದ್ದರೆ ನಮ್ಮಬೇರೆ ಪ್ರಯತ್ನ ಮಾಡುತ್ತೇವೆ” ಎಂದರು.

ಪಾದಯಾತ್ರೆ ಬಗ್ಗೆ ಹಾಗೂ ನಡೆಸುತ್ತಿರುವವರಿಗೆ ನಿಮ್ಮ ಸಂದೇಶವೇನು ಎಂದಾಗ “ಶುಭವಾಗಲಿ. ಪಾದಯಾತ್ರೆಯ ಖುಷಿಯನ್ನು ಅನುಭವಿಸಲಿ. ಪಾದಯಾತ್ರೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ” ಎಂದು ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?