Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆ್ಯಸಿಡ್ ದಾಳಿ ಮಾಡಲು ಪ್ರಯತ್ನಿಸಿದವರನ್ನು ತಕ್ಷಣ ಬಂಧಿಸಲು ಆಗ್ರಹ

ಬೆಳಗಾವಿ : ತಮ್ಮ ಮೇಲೆ ಆ್ಯಸಿಡ್ ದಾಳಿ ಮಾಡಲು ಪ್ರಯತ್ನಿಸಿದವರನ್ನು ತಕ್ಷಣ ಬಂಧಿಸುವಂತೆ ಕಾಂಗ್ರೆಸ್ ಪಕ್ಷದ ಧುರೀಣ ಲಕ್ಕಣ್ಣ ಸಂಸುದ್ದಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ. ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಶ್ರೀಮಂತ ಪೂಜೇರಿ ಮತ್ತು ಶ್ರೀಕಾಂತ ಪೂಜೇರಿ ಹಾಗೂ ಇತರ 30 ಜನರನ್ನು ಬಂಧಿಸುವ ಕುರಿತು ಅವರು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ.

ನಮ್ಮ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಲ್ಲದೆ ಆಸಿಡ್ ಎರಚುವ ಪ್ರಯತ್ನ ಮಾಡಲಾಗಿದೆ. ಈ ಬಗ್ಗೆ ಈಗಾಗಲೇ ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಿಸಿಟಿವಿ ಫೋಟೋ ಸಹ ಒದಗಿಸಲಾಗಿದೆ. ಆದರೆ, ಆರೋಪಿಗಳನ್ನು ಇದುವರೆಗೂ ಬಂಧಿಸದೇ ಇರುವುದು ತೀವ್ರ ಖಂಡನೀಯ. ಶ್ರೀಮಂತ ಪೂಜೇರಿ ಅವರು ಹಲವು ವರ್ಷಗಳಿಂದ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಹಾಗೂ ಶ್ರೀಮಂತ ಮಹಾರಾಜ ಸ್ವಾಮಿ ವೇಷ ಹಾಕಿಕೊಂಡು ತಿರುಗುತ್ತಿದ್ದು ಅನೇಕ ಜನರಿಗೆ ಮೋಸ ಮಾಡಿರುವುದು ಈಗಾಗಲೇ ಬೆಳಕಿಗೆ ಬಂದಿದೆ. ಇವರು ಮಳಲಿ ಶಿಕ್ಷಕರು ಮುಧೋಳ ಇವರಿಗೆ ನಲವತ್ತು ಲಕ್ಷದಷ್ಟು ದುಡ್ಡನ್ನು ಪಡೆದು ಮೋಸ ಮಾಡಿ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದು ಈಗಾಗಲೇ ಈ ಬಗ್ಗೆ ಬಾಗಲಕೋಟೆ ಎಸ್ಪಿ ಮತ್ತು ಡಿವೈಎಸ್ಪಿ ಜಮಖಂಡಿ ಅವರಿಗೆ ದೂರು ನೀಡಿದ್ದು, ಇವರಿಗೆ ಸಹಾಯ ಮಾಡಿದ್ದೇನೆ ಎಂದು ತಿಳಿದುಕೊಂಡು ಮಹಾಲಿಂಗಪುರ ಪಟ್ಟಣದ 30 ಜನ ರೌಡಿಗಳನ್ನು ಕರೆದುಕೊಂಡು ನಮ್ಮ ಮೇಲೆ ಹಲ್ಲೆ ಮಾಡಿರುತ್ತಾರೆ. ಆದ ಕಾರಣ ತಕ್ಷಣ ಅವರನ್ನು ಬಂಧಿಸಿ ನ್ಯಾಯ ಒದಗಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಎಸ್.ಪಿ ಕಚೇರಿ ಮುಂದೆ ಪ್ರತಿಭಟಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ