Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸವದತ್ತಿಯನ್ನು ಧಾರವಾಡ ಜಿಲ್ಲೆಗೆ ಸೇರ್ಪಡೆ ಮಾಡಲು ಬೇಡಿಕೆ

ಸವದತ್ತಿ: ಬೆಳಗಾವಿ ಜಿಲ್ಲಾ ವಿಭಜನೆ ಕೂಗು ಹೆಚ್ಚಿದ ಕುರಿತು ಸವದತ್ತಿ ತಾಲ್ಲೂಕು ನಾಗರಿಕರ ವೇದಿಕೆಯಿಂದ ಇಲ್ಲಿನ ಕಲ್ಮಠದಲ್ಲಿ ವಿವಿಧ ಸಂಘಟನೆ ಹಾಗೂ ಪ್ರಮುಖರಿಂದ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲೆ ವಿಭಜನೆಯಾದಲ್ಲಿ ಸವದತ್ತಿ ತಾಲ್ಲೂಕನ್ನು ಧಾರವಾಡ ಜಿಲ್ಲೆಗೆ ಸೇರಿಸಲು ಒಮ್ಮತದಿಂದ ನಿರ್ಣಯಿಸಲಾಯಿತು.

ಬಿಡಿಸಿಸಿ ನಿರ್ದೇಶಕ ವಿರುಪಾಕ್ಷ ಮಾಮನಿ ಮಾತನಾಡಿ, ಜಿಲ್ಲೆ ವಿಭಜನೆ ಕೂಗು ಕೇಳಿಬಂದಾಗ ಈ ಹಿಂದೆ ಹಲವು ಬಾರಿ ಹೋರಾಟಗಳು ನಡೆದಿವೆ. ಸವದತ್ತಿಯಿಂದ ಬೆಳಗಾವಿಗೆ ಸುಮಾರು 90 ಕಿ.ಮೀ ಅಂತರವಿದ್ದು ಜನತೆಗೆ ಸಂಚರಿಸಲು ಹೆಚ್ಚು ಸಮಯ ವ್ಯಯಿಸುವಂತಾಗಿದೆ. ಸಣ್ಣ ಕೆಲಸಕ್ಕೂ ಇಡೀ ಒಂದು ದಿನ ಕಳೆಯಬೇಕಾದ ಅನಿವಾರ್ಯವಿದೆ. 36 ಕಿ.ಮೀ ಸಮೀಪದಲ್ಲಿರುವ ಧಾರವಾಡ ಜಿಲ್ಲೆಗೆ ಸವದತ್ತಿಯನ್ನು ಸೇರಿಸಿದಲ್ಲಿ ಸಮಯದ ಜೊತೆ ಆರ್ಥಿಕ ಹೊರೆಯೂ ತಪ್ಪಲಿದೆ. ತ್ವರಿತವಾಗಿ ಎಲ್ಲ ಸೌಲಭ್ಯಗಳು ಸರಳ ರೀತಿಯಲ್ಲಿ ಸಿಗಲಿವೆ’ ಎಂದರು.

ಹೋರಾಟ ನಡೆದ ವೇಳೆ ನಿರ್ಣಯ ಕೈಗೊಳ್ಳುವುದಾಗಿ ಸರ್ಕಾರಗಳು ಹೇಳಿದ್ದವು. ಆದರೆ ಈವರೆಗೂ ಪ್ರಕ್ರಿಯೆ ನಡೆದಿಲ್ಲ. ಆದ್ದರಿಂದ ಮತ್ತೆ ಹೋರಾಟ ನಡೆಸಿ ಧಾರವಾಡಕ್ಕೆ ಸೇರಿಸಲು ಸಿದ್ಧತೆ ನಡೆಸಬೇಕಿದೆ. ಹೋರಾಟ ಸಮಿತಿಗಳನ್ನು ನಿರ್ಮಿಸಿ ರೂಪುರೇಷೆಗಳೊಂದಿಗೆ ಮತ್ತೆ ಸಭೆ ನಡೆಸಿ ಚರ್ಚೆ ನಡೆಯಲಿ. ಅಧಿವೇಶನ ಮುಕ್ತಾಯದೊಳಗೆ ಒಂದು ದಿನ ಸವದತ್ತಿ ಬಂದ್ ಗೆ ಕರೆ ನೀಡಿ ಯಶಸ್ವಿಗೊಳಿಸಿ ಸರ್ಕಾರ ಗಮನ ಸೆಳೆಯಲು ಪ್ರಯತ್ನಿಸೋಣ ಎಂದು ತಿಳಿಸಿದರು.

ಹೋರಾಟ ಸಮಿತಿಗೆ ಅಭಿನಂದನ ಕಬ್ಬಿಣ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಧಾರವಾಡ ಜಿಲ್ಲೆಗೆ ಸೇರಿಸುವ ಹೋರಾಟಕ್ಕೆ ಗೆಲುವು ಸಿಗುವವರೆಗೂ ವಿವಿಧ ಸಂಘಟನೆಗಳಿಂದ ತಹಶೀಲ್ದಾರ್‌ ಕಚೇರಿ ಎದುರು ನಿತ್ಯ ಸತ್ಯಾಗ್ರಹ ನಡೆಸಲು ನಿರ್ಣಯಿಸಲಾಯಿತು.

ವಕೀಲರ ಸಂಘ, ವರ್ತಕರ ಸಂಘ, ಟ್ಯಾಕ್ಸಿ ಸ್ಟ್ಯಾಂಡ್‌, ಕನ್ನಡ ಪರ ಸಂಘಟನೆಗಳು, ಸಹಕಾರಿ ಸಂಘದ ಪ್ರತಿನಿಧಿಗಳು, ಪುರಸಭೆ ಸದಸ್ಯರು, ಸ್ಥಳೀಯ ನಾಗರಿಕರು ಇದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?