Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಿಂದ ಮಂತ್ರಾಲಯಕ್ಕೆ ರೈಲು ಸೇವೆ ನೀಡಲು ಬೇಡಿಕೆ

ಬೆಳಗಾವಿ : ಬೆಳಗಾವಿಯಿಂದ ಮಂತ್ರಾಲಯಕ್ಕೆ ರೈಲು ಸೇವೆ ನೀಡಬೇಕು ಎಂಬ ಒತ್ತಾಯ ವ್ಯಕ್ತವಾಗಿದೆ.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ರೈಲು ಯೋಜನೆಗಳ ಕುರಿತು ನೈಋತ್ಯ ರೈಲ್ವೆಗೆ ಮನವಿಯನ್ನು ಸಲ್ಲಿಕೆ ಮಾಡಲಾಗಿದೆ. ಹಲವು ಹೊಸ ರೈಲುಗಳ ಸಂಚಾರ, ಮೂಲ ಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಡಲಾಗಿದೆ. ಫೆಬ್ರವರಿಯಲ್ಲಿ ಮಂಡನೆಯಾಗಲಿರುವ ಬಜೆಟ್‌ನಲ್ಲಿ ಹೊಸ ರೈಲು ಸೇವೆಗಳಿಗೆ ಅನುಮತಿ ಸಿಗಲಿದೆಯೇ? ಎಂದು ಕಾದು ನೋಡಬೇಕಿದೆ.

ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿಯ ಹೊಸಪೇಟೆ ಸದಸ್ಯರು ನೈಋತ್ಯ ರೈಲ್ವೆ ವ್ಯವಸ್ಥಾಪಕರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿದರು.

ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಯೋಜನೆಗಳ ಕುರಿತು ಬೇಡಿಕೆಯನ್ನು ಈಡೇರಿಸಲು ಮನವಿ ಪತ್ರವನ್ನು ಸಲ್ಲಿಕೆ ಮಾಡಿದರು.

ಯಾವ-ಯಾವ ಬೇಡಿಕೆಗಳು?

ಬೆಳಗಾವಿ-ಹೈದರಾಬಾದ್-ಮಂಗಳೂರು ರೈಲು ಖಾಯಂಗೊಳಿಸಿ. ರೈಲು ನಂಬರ್ 07335/ 36 ರೈಲನ್ನು ಖಾಯಂಗೊಳಿಸಬೇಕು. ಬೆಳಗಾವಿ-ಹೈದರಾಬಾದ್-ಮಂಗಳೂರು ರೈಲು ಉತ್ತರ ಕರ್ನಾಟಕವನ್ನು ಮಂತ್ರಾಲಯ ಜೊತೆ ಸಂಪರ್ಕಿಸಲಿದೆ. ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಹೋಗುವ ಮತ್ತು ಭದ್ರಾಚಲಂಗೆ ಸಂಚಾರ ನಡೆಸುವ ಭಕ್ತರಿಗೆ ಅನುಕೂಲವಾಗಿದೆ. ಈ ರೈಲನ್ನು ಖಾಯಂಗೊಳಿಸಿ ನಿರಂತರವಾಗಿ ಓಡಿಸಬೇಕು ಎಂದು ಮನವಿ ಸಲ್ಲಿಕೆ ಮಾಡಲಾಗಿದೆ.
* ಹೊಸಪೇಟೆ-ದಾವಣಗೆರೆ-ಮಂಗಳೂರು ಹೊಸ ರೈಲು. ಹೊಸಪೇಟೆ-ದಾವಣಗೆರೆ-ಮಂಗಳೂರು ನಡುವೆ ಹೊಸ ರೈಲು ಸೇವೆ ಆರಂಭಿಸಬೇಕು. ಇದರಿಂದಾಗಿ ಯುನೆಸ್ಕೋ ಮಾನ್ಯತೆ ಪಡೆದಿರುವ ಹಂಪಿ, ಬೇಲೂರು-ಹಳೆಬೀಡು ನಡುವೆ ನೇರ ಸಂಪರ್ಕ ಸಾಧ್ಯವಾಗಲಿದೆ. ಅಲ್ಲದೇ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ, ಶ್ರವಣಬೆಳಗೊಳಕ್ಕೆ ಪ್ರಯಾಣಿಸುವ ಜನರಿಗೂ ಅನುಕೂಲವಾಗಲಿದೆ. ಈ ರೈಲು ಕಲ್ಯಾಣ ಕರ್ನಾಟಕವನ್ನು ಕರಾವಳಿಯೊಂದಿಗೆ ನೇರವಾಗಿ ಸಂಪರ್ಕಿಸಲಿದೆ. ಆದ್ದರಿಂದ ರೈಲು ಆರಂಭಿಸಬೇಕು ಎಂದು ಮನವಿಯಲ್ಲಿ ವಿವರಣೆ ನೀಡಲಾಗಿದೆ.

* ಹೊಸಪೇಟೆ ರೈಲು ನಿಲ್ದಾಣ ಆಧುನೀಕರಣ. ವಿಜಯನಗರ ಜಿಲ್ಲೆಯ ಕೇಂದ್ರಸ್ಥಾನವಾದ ಹೊಸಪೇಟೆ ರೈಲು ನಿಲ್ದಾಣವನ್ನು ಆಧುನೀಕರಣಗೊಳಿಸಬೇಕು. ಪಿಟ್‌ ಲೈನ್ ನಿರ್ಮಾಣ ಮಾಡಿ ಸರಕು ಸಾಗಣೆ ರೈಲುಗಳನ್ನು ಸ್ಥಳಾಂತರ ಮಾಡಬೇಕು. ಎರಡು ಹೊಸ ಪ್ಲಾಟ್‌ ಫಾರಂ ನಿರ್ಮಾಣ ಮಾಡಬೇಕು. ಪ್ರಮುಖ ಕಟ್ಟಡದಲ್ಲಿ ಮೊದಲ ಮಹಡಿ ನಿರ್ಮಾಣ ಮಾಡಬೇಕು. ಲಿಫ್ಟ್ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ.

* ಹೊಸದಾಗಿ ಅಂಡರ್‌ಪಾಸ್, ಮೇಲ್ಸೆತುವೆ ನಿರ್ಮಾಣ. ಹೊಸಪೇಟೆಯ ಚಿತವಾಡಿಯಲ್ಲಿ ಸುಮಾರು 50 ಸಾವಿರ ಜನರು ವಾಸವಾಗಿದ್ದಾರೆ. ಈ ಪ್ರದೇಶ ಹೊಸಪೇಟೆ ನಗರದ ವ್ಯಾಪ್ತಿಯಲ್ಲಿದೆ. ಇಲ್ಲಿಂದ ಶಾಲೆ, ಕಾಲೇಜು, ಕೃಷಿ ಕೆಲಸಗಳಿಗೆ ತೆರಳುವ ಅನೇಕ ಜನರಿದ್ದಾರೆ. ಇಲ್ಲಿ ಸರಕು ಸಾಗಣೆ, ಪ್ರಯಾಣಿಕ ರೈಲು ಸಂಚಾರದ ವೇಳೆ ಜನರು ಕಾಯಬೇಕಿದೆ. ಆದ್ದರಿಂದ ಅಂಡರ್‌ಪಾಸ್ ಅಥವ ಮೇಲ್ಸೇತುವೆ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಲಾಗಿದೆ.

* ಹೊಸಪೇಟೆ-ದಾವಣಗೆರೆ-ತುಮಕೂರು ಡೆಮು ರೈಲು. ಹೊಸಪೇಟೆ-ದಾವಣಗೆರೆ-ತುಮಕೂರು ನಡುವೆ ಹೊಸ ಡೆಮು ರೈಲು ಸೇವೆಯನ್ನು ಆರಂಭಿಸಬೇಕು. ಬೆಂಗಳೂರು ನಗರಕ್ಕೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಈ ರೈಲು ಸೇವೆ ಸಹಾಯಕವಾಗಲಿದೆ ಎಂದು ಸಮಿತಿ ಹೇಳಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?