Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಪ್ರಧಾನಿ ಮೋದಿಯನ್ನು ರಹಸ್ಯವಾಗಿ ಭೇಟಿಯಾದ್ರಾ ಡಿಕೆಶಿ ?

ಬೆಂಗಳೂರು : ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಇದೀಗ ದೇಶದ ರಾಜಕಾರಣದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿದೆ.

ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರಿಗೆ ಎದುರೇಟು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ದಿನಕ್ಕೆ ಒಬ್ಬರಂತೆ ಆಕಾಂಕ್ಷಿಗಳು ಸೃಷ್ಟಿಯಾಗುತ್ತಿದ್ದಾರೆ. ಈ ನಡುವೆ ಡಿ.ಕೆ. ಶಿವಕುಮಾರ್ ಅವರು ರಹಸ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿ ಹರಡಿದೆ

ಮುಖ್ಯಮಂತ್ರಿಗಳಿಗೂ ಅಷ್ಟು ಸುಲಭವಾಗಿ ಸಿಗದ ಪ್ರಧಾನಮಂತ್ರಿಯ ಭೇಟಿಯ ಸಮಯಾವಕಾಶ, ನಿಮಗೆ ಸಿಕ್ಕಿದ್ದು ಹೇಗೆ? ಮುಡಾ, ವಾಲ್ಮೀಕಿ ನಿಗಮದ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವೇಳೆ, ನೀವು ಪ್ರತ್ಯೇಕವಾಗಿ ಯಾಕೆ ಮೋದಿಯವರನ್ನು ಭೇಟಿಯಾಗಿದ್ದೀರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ಈ ರೀತಿಯ ಸುದ್ದಿಯನ್ನು ಮಾಧ್ಯಮವೊಂದು ಪ್ರಕಟಿಸಿತ್ತು, ಇದನ್ನು ಆಧರಿಸಿ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟ್ವೀಟ್ (ಎಕ್ಸ್) ಒಂದನ್ನು ಮಾಡಿದ್ದಾರೆ. ಜೀವನವೆಲ್ಲಾ ಕಾಂಗ್ರೆಸ್ ಪಕ್ಷದ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ ಎನ್ನುವ ಸಲಹೆಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದಾರೆ.

ಕಳೆದ ಜುಲೈ ತಿಂಗಳಾಂತ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆದಿಯಾಗಿ ಹಲವು ನಾಯಕರು ದೆಹಲಿಗೆ ಭೇಟಿ ನೀಡಿದ್ದರು. ಆ ವೇಳೆ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಹೇರಿದಂತೆ ಹಲವು ಕೇಂದ್ರ ಸಚಿವರನ್ನು ಎಲ್ಲರೂ ಜೊತೆಯಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಆದರೆ, ಪ್ರಧಾನಿ ಮೋದಿಯವರ ಭೇಟಿಗೆ ಮಾತ್ರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ಹೋಗಿದ್ದರು. ಜುಲೈ 31ರಂದು ಡಿಕೆಶಿ - ಮೋದಿ ಭೇಟಿಯಾಗಿತ್ತು, ಮಾಧ್ಯಮದ ಪ್ರಕಾರ ಈ ಭೇಟಿಯು ಕಾಂಗ್ರೆಸ್ ವರಿಷ್ಠರ ಕಣ್ಣು ಕೆಂಪಗಾಗಿಸಿದೆ. ರಾಜ್ಯದ ನಾಯಕರು ಮತ್ತು ಸಿಎಂ ಕೂಡಾ ದೆಹಲಿಯಲ್ಲೇ ಇದ್ದಾಗ, ಡಿಕೆಶಿ ಯಾಕೆ ಪ್ರತ್ಯೇಕವಾಗಿ ಭೇಟಿಯಾದರು ಎನ್ನುವುದು ಹೈಕಮಾಂಡ್ ಪ್ರಶ್ನೆಯಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು ನಗರಾಭಿವೃದ್ದಿ ಮತ್ತು ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಹೆಚ್ಚಿನ ಅನುದಾನ ಬಿಡುಗಡೆ ವಿಚಾರದಲ್ಲಿ ಪ್ರಧಾನಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ ಎಂದು ಡಿಕೆಶಿ, ಮೋದಿ ಭೇಟಿಯ ನಂತರ ಹೇಳಿದ್ದರು. ಇದೇ ಮಾತನ್ನು ಡಿಕೆಶಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಗೂ ಹೇಳಿದ್ದಾರೆ.

ಈ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಆರ್.ಅಶೋಕ್ ಟ್ವೀಟ್ ಮಾಡಿದ್ದು ಹೀಗೆ, " ಸಿಎಂ @siddaramaiah ಅವರ ರಾಜೀನಾಮೆ ನಂತರ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಜೋರಾಗುತ್ತಿರುವ ನಡುವೆಯೇ, ಹೈಕಮಾಂಡ್ ಏಜೆಂಟ್ ಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗು ಕೆ.ಸಿ.ವೇಣುಗೋಪಾಲ್ ಅವರಿಗೆ ಡಿಸಿಎಂ @DKShivakumar
ಅವರ ಮೇಲೆ ಅನುಮಾನ ಹುಟ್ಟಿಕೊಂಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ".

"ಡಿಸಿಎಂ @DKShivakumar ಅವರೇ, ಕಾಂಗ್ರೆಸ್ ಪಕ್ಷದ ಸಂಪ್ರದಾಯದಲ್ಲಿ ಪಲ್ಲಕ್ಕಿ ಹೊರುವವರೇ ಬೇರೆ, ಉತ್ಸವ ಮೂರ್ತಿ ಆಗುವವರೇ ಬೇರೆ. ಜೀವನವೆಲ್ಲಾ ಕಾಂಗ್ರೆಸ್ ಪಕ್ಷದ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ".

"ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರಿಂದ ಹಿಡಿದು ಪಕ್ಕದ ಆಂಧ್ರ ಪ್ರದೇಶದ ಜಗನ್ ರೆಡ್ಡಿ ಅವರವರೆಗೂ ಅನೇಕ ನಾಯಕರು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದ ಮೇಲೆಯೇ ಮುಖ್ಯಮಂತ್ರಿ ಆಗಲಿಕ್ಕೆ ಸಾಧ್ಯವಾಗಿದ್ದು".
"ಇತಿಹಾಸದ ಅರಿವಿದ್ದವರಿಂದ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಕಾಂಗ್ರೆಸ್ ಪಕ್ಷದ ಇತಿಹಾಸ ನಿಮಗೆ ಚೆನ್ನಾಗಿ ಗೊತ್ತಿದೆ ಎಂದು ಭಾವಿಸಿದ್ದೇನೆ" ಎಂದು ಅಶೋಕ್, ಟ್ವೀಟ್ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಲೆಳೆದಿದ್ದಾರೆ.

ಒಟ್ಟಾರೆ ಇದೀಗ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿ ಕರ್ನಾಟಕ ರಾಜಕಾರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗುತ್ತಾ ಕಾದು ನೋಡಬೇಕಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು