Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆಎಂದು ವರದಿಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆರಬಹುದು ಎಂದು ಭಾವಿಸಲಾಗಿದೆ.
ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ ರೆಡ್ಡಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ.ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ತಮ್ಮ ನಿವಾಸಗಳಲ್ಲಿ ಇದ್ದರು ಎನ್ನಲಾಗಿದೆ.
ಬುಧವಾರ ಬೆಳಗಿನ ಜಾವ 4ರಿಂದ 5 ಗಂಟೆಯ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಸುಮಾರು ಏಳೆಂಟು ತಂಡಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳು ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಯಾವ ಪ್ರಕರಣದಲ್ಲಿ ಸಂಸದರು ಮತ್ತು ಶಾಸಕರ ಮನೆಗಳ ಮೇಲೆ ದಾಳಿ ನಡೆದಿದೆ ಎಂಬುದು ಖಚಿತವಾಗಿಲ್ಲವಾದರೂ ನಾಗೇಂದ್ರ ಅವರ ಆಪ್ತ ಗೋವರ್ಧನ ರೆಡ್ಡಿ ಮನೆ ಮೇಲೆಯೂ ದಾಳಿ ನಡೆದಿರುವುದರಿಂದ ಇದು ವಾಲ್ಮೀಕಿ ನಿಗಮದ ಹಗರಣದ ತನಿಖೆಗೆ ಸಂಬಂಧಿಸಿರಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ವಾಲ್ಮೀಕಿ ನಿಗಮದ ಹಣವನ್ನು ಬಳಸಲಾಗಿದೆ ಎಂಬ ಆರೋಪವಿದ್ದು, ಸುಮಾರು 20 ಕೋಟಿ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಲಾಗಿದೆ ಎಂದು ಆರೋಪಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?