Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಂದರಗಿ ಕ್ರೀಡಾ ಶಾಲೆಗೆ ಕೇಂದ್ರ ಸಚಿವರನ್ನು ಆಹ್ವಾನಿಸಿದ ಈರಣ್ಣ ಕಡಾಡಿ

ಬೆಳಗಾವಿ : ಚಂದರಗಿ ಗ್ರಾಮದಲ್ಲಿ ಸಹಕಾರ ಕ್ಷೇತ್ರದಲ್ಲಿ ನಿರ್ಮಾಣಗೊಂಡ ದೇಶದ ಏಕೈಕ ಕ್ರೀಡಾ ವಸತಿ ಶಾಲೆಯಲ್ಲಿ ರೂ. 1.50 ಕೋಟಿ ವೆಚ್ಚದಲ್ಲಿ ಅಂತರಾಷ್ಟ್ರೀಯ ಮಟ್ಟದ ಅತ್ಯಾಧುನಿಕ ಸೈಕ್ಲಿಂಗ್ ಟ್ರ‍್ಯಾಕ್ (ವೆಲೊಡ್ರೋಮ್) ಅನ್ನು ಉದ್ಘಾಟಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸಚಿವರನ್ನು ವಿನಂತಿಸಿದರು.

ಚಂದರಗಿ ಕ್ರೀಡಾ ವಸತಿ ಶಾಲೆ ಸಹಕಾರ ಕ್ಷೇತ್ರದಲ್ಲಿ ನಡೆಯುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಸದರಿ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಸೈಕ್ಲಿಂಗ್ ಟ್ರ‍್ಯಾಕ್ ಬೆಂಗಳೂರು ನಂತರ ಉತ್ತರ ಕರ್ನಾಟಕದ ಏಕೈಕ ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಟ್ರ‍್ಯಾಕ್ ಆಗಿರುತ್ತದೆ. ಇದರಡಿ ಸೈಕ್ಲಿಂಗ್ ತರಬೇತಿಗೆ ಬೇಕಾದ ಮೂಲಸೌಕರ್ಯ ಅಭಿವೃದ್ದಿ, ಪರಿಣಿತ ತರಬೇತಿ ತಂಡ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ನಿರ್ಮಾಣದೊಂಡಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಂದ ಬಂದ ಸೈಕ್ಲಿಂಗ್ ಪಟುಗಳನ್ನು ಗಮನದಲ್ಲಿ ಇಟ್ಟುಕೊಂಡು ಅವರಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಯೊಡ್ಡಲು ಈ ಸಂಸ್ಥೆ ಸಹಕಾರಿಯಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಸಚಿವರು ಸಂಸ್ಥೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ಡೇರಿ ಫಾರ್ಮ ಮತ್ತು ಲೋಕಸಭೆ ಹೊಲುವ ಮಾದರಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಡೈನಿಂಗ್ ಹಾಲ್ ಮತ್ತು ಶಾಲೆಗಳಿಗಾಗಿ ತರಕಾರಿಗಳನ್ನು ಬೆಳೆಯುವುದು ಹೀಗೆ ಹಲವಾರು ಮಾಹಿತಿಗಳನ್ನು ಪಡೆದ ಸಚಿವರು ಸಂತಸ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಹಿತೈಷಿ ಸಿದ್ದರಾಮ ಕಲೂತಿ ಮತ್ತು ಸಂಸ್ಥೆಯ ನಿರ್ದೇಶಕ ಪೃಥ್ವಿರಾಜ ಜಾಧವ ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು