Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಕುಂಭಮೇಳದಲ್ಲಿ ಮಹಾಸ್ನಾನಗೈದು ಕೃತಾರ್ಥರಾಗಿ ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದ ಈರಣ್ಣ ಕಡಾಡಿ

 

ಮೂಡಲಗಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಗಂಗಾ, ಯಮುನಾ, ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ವಿಶೇಷ ಪೂಜೆ ನೇರವೇರಿಸಿ ಲೋಕ ಕಲ್ಯಾಣಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಶುಕ್ರವಾರ ಫೆ-21 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸುಮಾರು 60 ಕೋಟಿ ಭಕ್ತರು ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ಥಾನ ಮಾಡಿದ್ದಾರೆ. ಒಂದು ಸಣ್ಣ ಮದುವೆ ಆಯೋಜನೆ ಮಾಡುವ ಮನೆಯ ಯಜಮಾನ ಎಷ್ಟು ತಯಾರಿ ಮಾಡಿದರೂ ಕೆಲವು ಕೊರತೆಗಳು ಉಂಟಾಗುತ್ತವೆ. ಆದರೆ ಉತ್ತರ ಪ್ರದೇಶ ಸರಕಾರ ದೇಶದ ಅರ್ಧದಷ್ಟು ಜನ ಪ್ರಯಾಗರಾಜ್ ಗೆ ಭೇಟಿ ನೀಡಿದರು ಕೂಡ ಇವರುಗಳ ಊಟೊಪಚಾರ, ವಸತಿ, ವಾಹನ ಸೌಕರ್ಯ, ವೈದ್ಯಕೀಯ ಸೇವೆ ಮತ್ತು ಪುಣ್ಯ ಸ್ನಾನ ಈ ಎಲ್ಲವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಿಕೊಂಡು ಬಂದಿದೆ. ಇದು ಸರ್ಕಾರದ ಕಾರ್ಯಕ್ಷಮತೆಯನ್ನು ತೋರಿಸುತ್ತದೆ ಎಂದರು.

ಕೆಲ ವಿರೋಧ ಪಕ್ಷಗಳು ಬಿಜೆಪಿಯನ್ನು ಟೀಕೆ ಮಾಡುವ ಬರದಲ್ಲಿ ಇಲ್ಲಿಗೆ ಭೇಟಿ ನೀಡಿದ ದೇಶದ 60 ಕೋಟಿ ಜನ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ಇದು ಪಾಪದ ಕೆಲಸ. ಟೀಕೆ ಮಾಡುವ ವಿರೋಧಪಕ್ಷದ ನಾಯಕರು ಕೂಡ ಇಲ್ಲೊಮ್ಮೆ ಭೇಟಿ ನೀಡಿ ಗಂಗೆಯಲ್ಲಿ ಮಿಂದೆದ್ದು ಪಾಪ ಕಳೆದುಕೊಂಡರೆ ಒಳ್ಳೆಯದೆಂದು ಭಾವಿಸುತ್ತೇನೆ ಎಂದರು.

144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ ರಾಜ್ ನ ಮಹಾಕುಂಭಮೇಳ ಅತ್ಯಂತ ಯಶಸ್ವಿಯಾಗಿದೆ. ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ ಮತ್ತು ಅವರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು