Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಬೆಳಗಾವಿಗೆ ವಂದೇ ಭಾರತ ರೈಲು

ಬೆಳಗಾವಿ : ಕೊನೆಗೂ ಬೆಳಗಾವಿಗೆ ವಂದೇ ಭಾರತ್ ರೈಲು ಬರಲಿದೆ. ಇದು ಬೆಳಗಾವಿ-ಪುಣೆ ನಗರವನ್ನು ಬೆಸೆಯಲಿದೆ.

ಕಳೆದ ಹಲವು ತಿಂಗಳಿನಿಂದ ಬೆಳಗಾವಿ ಜನತೆಯ ನಿರೀಕ್ಷೆಯಲ್ಲಿದ್ದ ವಂದೇ ಭಾರತ್ ರೈಲು ಸೇವೆ ಶೀಘ್ರ ಆರಂಭವಾಗಲಿದ್ದು, ಬೆಳಗಾವಿಯಿಂದ ಪುಣೆಗೆ ತೆರಳುವ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಪುಣೆ-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಿಸಲು ರೈಲ್ವೆ ಇಲಾಖೆ ಪ್ರಯತ್ನ ಆರಂಭಿಸಿದೆ. ಹಾಗಾಗಿ ಬೆಳಗಾವಿಯ ನಾಗರಿಕರು ಈಗ ಅತಿವೇಗದಲ್ಲಿ ಸಂಚರಿಸಲಿರುವ ವಂದೇ ಭಾರತ್ ಮೂಲಕ ಪುಣೆ ತಲುಪಲು ಸಾಧ್ಯವಾಗುತ್ತದೆ.

ಪುಣೆ-ಬೆಂಗಳೂರು ರೈಲು ಮಾರ್ಗದಲ್ಲಿ ವಿದ್ಯುದ್ದೀಕರಣದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಮೀರಜ್‌ನಿಂದ ಕುಡಚಿವರೆಗೆ ಕೊನೆಯ ಹಂತದ ವಿದ್ಯುದ್ದೀಕರಣದೊಂದಿಗೆ ಪುಣೆ-ಬೆಂಗಳೂರು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ. ಬೆಳಗಾವಿ-ಬೆಂಗಳೂರು ಮಾರ್ಗದಲ್ಲಿ ಈಗಾಗಲೇ ವಂದೇ ಭಾರತ್ ಪರೀಕ್ಷೆ ನಡೆಸಲಾಗಿದೆ. ಆದರೆ ಸಮಯದ ಕೊರತೆಯಿಂದಾಗಿ ಈ ಪ್ರಸ್ತಾವನೆಯನ್ನು ತಿರಸ್ಕರಿಸಲಾಯಿತು. ಇದಾದ ನಂತರ ಭಾರತೀಯ ರೈಲ್ವೇ ಬೆಳಗಾವಿ-ಪುಣೆ ಮಾರ್ಗದಲ್ಲಿ ವಂದೇ ಭಾರತ್ ಆರಂಭಿಸಲು ಒಪ್ಪಿಗೆ ನೀಡಿತ್ತು. ಕಳೆದ ಒಂದು ತಿಂಗಳಿನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ಗಾಗಿ ಎಲ್ಲಾ ರೈಲು ನಿಲ್ದಾಣಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಲಾಗುತ್ತಿದೆ.

ಬೆಳಗ್ಗೆ 5 ಗಂಟೆಗೆ ಹುಬ್ಬಳ್ಳಿಯಿಂದ ಹೊರಡುವ ವಂದೇ ಭಾರತ್ ಬೆಳಗ್ಗೆ 7 ಗಂಟೆಗೆ ಬೆಳಗಾವಿ ತಲುಪಲಿದೆ. ಬಳಿಕ ಬೆಳಗಾವಿಯಿಂದ ಮೀರಜ್, ಸಾಂಗ್ಲಿ, ಸತಾರಾ ಮಾರ್ಗವಾಗಿ ಮಧ್ಯಾಹ್ನ 1.30ಕ್ಕೆ ಪುಣೆ ತಲುಪಲಿದೆ. ಅದೇ ರೀತಿ ಪುಣೆಯಿಂದ ಮಧ್ಯಾಹ್ನ 2:15 ಕ್ಕೆ ಹುಬ್ಬಳ್ಳಿಗೆ ಹೊರಡುವ ರೈಲು ರಾತ್ರಿ 8:40 ಕ್ಕೆ ಬೆಳಗಾವಿ ತಲುಪಲಿದೆ. ಏತನ್ಮಧ್ಯೆ, ಈ ವಂದೇ ಭಾರತ್ ಕುರಿತು ರೈಲ್ವೆ ಇಲಾಖೆಯಿಂದ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದೆ.

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ ಸೆಪ್ಟೆಂಬರ್ 17ರಿಂದ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?