Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಜಗಳದ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಹಳೆ ನಿಜಗಲ್ ಬಳಿ ಅನಂತಕುಮಾರ ಹೆಗಡೆ ಅವರು ಕಾರಿನಲ್ಲಿ ಬರುತ್ತಿದ್ದಾಗ, ಅವರ್‌ ಕಾರನ್ನು ಓವರ್‌ ಟೇಕ್‌ ಮಾಡಿದ ಕಾರನ್ನು ನಿಲ್ಲಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನೊಂದು ಕಾರನ್ನು ಸೈಫ್ ಖಾನ್ ಎಂಬುವವರು ಚಲಾಯಿಸುತ್ತಿದ್ದು ಅವರ ಕಾರು ಅನಂತಕುಮಾರ ಹೆಗಡೆ ಅವರ ಕಾರನ್ನು ಓವರ್‌ ಟೇಕ್‌ ಮಾಡಿಕೊಂಡು ಮುಂದೆ ಹೋದ ನಂತರ ಇವರ ಮುಂದಕ್ಕೆ ಹೋಗಲು ದಾರಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಓವರ್ ಟೇಕ್ ಮಾಡಿ ಕಾರು ನಿಲ್ಲಿಸಿ ವಾಗ್ವಾದ ನಡೆದಿದ್ದು ವಿಕೋಪಕ್ಕೆ ಹೋಯಿತು ಎನ್ನಲಾಗಿದೆ.

ಹೆಗಡೆ ಅವರ ಕಾರು ಚಾಲಕ, ಸೈಫ್ ಖಾನ್ ಅವರ ಕಾರಿಗೆ ಎರಡು ಮೂರು ಬಾರಿ ಹಾರ್ನ್ ಮಾಡಿದ್ದರೂ ಸೈಫ್ ಖಾನ್ ಅದನ್ನು ಗಮನಿಸದೆ ಚಾಲನೆಯನ್ನು ಮುಂದುವರೆಸಿದರು. ಇದಕ್ಕೆ ಕೋಪದಿಂದ ಹೆಗಡೆ ಅವರ ಕಾರು ಚಾಲಕ ಎಸ್‌ಯುವಿಯನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಜಗಳ ನಡೆದಿದ್ದು, ಇದು ವಿಕೋಪಕ್ಕೆ ಹೋಗಿ, ಹೆಗಡೆ ಅವರ ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರೂ ಹೊರಬಂದು ಸೈಫ್ ಖಾನ್ ಮತ್ತು ಇತರ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸೈಫ್ ಖಾನ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ, ಕುಟುಂಬದವರ ಹೇಳಿಕೆಯನ್ನು ದಾಖಲಿಸಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಹಾಗೂ ಇತರರನ್ನು ನೆಲಮಂಗಲದ ಸಮೀಪದ ಡಿವೈಎಸ್‌ಪಿ ಕಚೇರಿಗೆ ಕರೆಯಿಸಿಕೊಂಡು ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎನ್ನಲಾಗಿದೆ. ಓವರ್​ ಟೇಕ್‌​ ವೇಳೆ ಕಾರಿಗೆ ಮತ್ತೊಂದು ಕಾರ್ ಟಚ್ ಆಗಿದ್ದಕ್ಕೆ ಗಲಾಟೆ ನಡೆದೆ ಎಂದು ತಿಳಿಸಿದ್ದಾರೆ. ತಾವು ಕಾರಿನಲ್ಲಿದ್ದೆ, ಹಲ್ಲೆ ಮಾಡಿಲ್ಲ ಎಂದೂ ಅವರು ತಿಳಿಸಿದ್ದಾರೆ ಎನ್ನಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?