Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

ಬೆಳಗಾವಿ : ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಕಾಯು (91 ) ಅವರು ಸೋಮವಾರ ಬೆಳಗಾವಿಯ ಮಹಾಂತೇಶ ನಗರ ನಿವಾಸದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. 1972 ರಲ್ಲಿ ಗೋಕಾಕ ಕಾಂಗ್ರೆಸ್ ಶಾಸಕರಾಗಿ ಅವರು ಒಂದು ಅವಧಿಗೆ ಆಯ್ಕೆಯಾಗಿದ್ದರು. ಸರಳ-ಸಜ್ಜನಿಕೆಗೆ ಹೆಸರುವಾಸಿಯಾಗಿ ಜನಮನ ಗೆದ್ದಿದ್ದರು.
ಚಂದ್ರಶೇಖರ ಗುಡ್ಡಕಾಯು ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಕೆಲ ತಿಂಗಳ ಹಿಂದೆ ಚುನಾವಣೆ ನೆನಪು ಮೆಲುಕು ಹಾಕಿದ್ದ ಚಂದ್ರಶೇಖರ ಗುಡ್ಡಕಾಯು :

ನಾನು ಚುನಾವಣೆಗೆ ಖರ್ಚೇ ಮಾಡಿರಲಿಲ್ಲ.ಎಲ್ಲಾ ಮಾಡಿದ್ದು,ನೋಡಿಕೊಂಡಿದ್ದು ವಸಂತರಾವ್ ಅಣ್ಣಾ ಎಂದು ಗೋಕಾಕದ ಮಾಜಿ ಶಾಸಕ ಚಂದ್ರಶೇಖರ ಗುಡ್ಡಾಕಾಯು ಕೆಲ ತಿಂಗಳುಗಳ ಹಿಂದೆ ಅವರು ತಮ್ಮ ಚುನಾವಣೆಯ ಅನುಭವ ಹೇಳಿದ್ದರು.

1972 ರಲ್ಲಿ ಗೋಕಾಕದಿಂದ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಮಹಾರಾಷ್ಟ್ರ ಸರಕಾರದಲ್ಲಿ ನೀರಾವರಿ ಮಂತ್ರಿಯಾಗಿದ್ದ ದಿ.ಶಂಕರರಾವ್ ಚವ್ಹಾಣರಿಗೆ ಆಪ್ತ ಕಾರ್ಯದರ್ಶಿಯಾಗಿದ್ದರು. ಅಲ್ಲಿಂದ ಅವರನ್ನು ಬಿಡಿಸಿಕೊಂಡು ಬಂದ ರಾಯಬಾಗದ ವಸಂತರಾವ್ ಅಣ್ಣಾ ಗೋಕಾಕದಿಂದ ಚುನಾವಣೆಗೆ ನಿಲ್ಲಿಸಿದರು.ಆರಿಸಿಬಂದೆ ಎಂದು ಸ್ಮರಿಸಿಕೊಂಡಿದ್ದರು.

"ನನ್ನನ್ನು ಮಂತ್ರಿ ಮಾಡಲು ಮುಂದೆ ಬಂದ್ರು ದೇವರಾಜ ಅರಸ್ರು.
ಒಲ್ಲೆಯಪ್ಪ ಮಾಡೋದಿದ್ರೆ ವಸಂತರಾವ್ ಅವರನ್ನೇ ಮಾಡ್ರಿ” ಎಂದೆ. ಅವರೇ ಮಂತ್ರಿ ಆದರು ಎಂದು ಅಂದಿನ ಘಟನೆ ಮೆಲುಕು ಹಾಕಿದ್ದರು.

1972 ರಲ್ಲಿ ಗುಡ್ಡಾಕಾಯು ಅವರು 28,005 ಮತಗಳನ್ನು ಪಡೆದು ಆಯ್ಕೆಯಾಗಿದ್ದರು.ಸಂಸ್ಥಾ ಕಾಂಗ್ರೆಸ್ಸಿನ ಬಿ.ಎಮ್.ಪಾಟೀಲರು 11144 ಮತ ಪಡೆದಿದ್ದರು. 1978 ರಲ್ಲಿ ನಾನು, ವಸಂತರಾವ ಸೇರಿಯೇ ಗೋಕಾಕ ಮತ್ತು ಅರಭಾವಿಗಳಲ್ಲಿ ಸೋತೆವು ಎಂದು ಗುಡ್ಡಾಕಾಯು ಹೇಳಿದ್ದರು. ಕಾಂಗ್ರೆಸ್ ಇಬ್ಬಾಗವಾಗಿ ರೆಡ್ಡಿ ಕಾಂಗ್ರೆಸ್ಸಿನಿಂದ ಇವರಿಬ್ಬರೂ ಪರಾಭವಗೊಂಡಿದ್ದರು. ಮಾಜಿ ಶಾಸಕರಾದ ಮೇಲೆ ಗುಡ್ಡಾಕಾಯು ಅವರು ಬೆಳಗಾವಿಯ ಮಹಾಂತೇಶನಗರದಲ್ಲಿ ವಾಸಿಸುತ್ತಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?