Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಡಿನ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ – 96 ವರ್ಷ) ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಡಿನ ಹೆಸರಾಂತ ಸಾಹಿತಿಯಾಗಿದ್ದ ಕಾಪಸೆ ಅವರು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದರು.

ಧಾರವಾಡ ಸಪ್ತಾಪುರ ದುರ್ಗಾ ಕಾಲೋನಿಯ ನಿವಾಸಿಯಾಗಿದ್ದ ಕಾಪಸೆ, ಮೂಲ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮದವರು. 1928ರ ಎಪ್ರಿಲ್ 2ರಂದು ಜನಿಸಿದ್ದ ಅವರು ಕವಿ ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತು ಅಪಾರ ಅಧ್ಯಯನ ಮಾಡಿದ್ದರು. ಮಧುರ ಚೆನ್ನರ ಕುರಿತಾಗಿಯೇ ಮಹಾಪ್ರಬಂಧ ರಚಿಸಿದ್ದರು.

ಮಧುರ ಚೆನ್ನ, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಇವರ ಪ್ರಮುಖ ಕೃತಿಗಳು. ಮರಾಠಿಯಿಂದ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮಕ್ಕಳ ಸಾಹಿತ್ಯದಲ್ಲಿ ಹಲವು ಕೃತಿಗಳ ರಚನೆ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಡಾ. ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ. ಸ. ಖಾಂಡೇಕರ್ ಅವರ ʼಒಂದು ಪುಟದ ಕಥೆ’ಗೆ ಕಳೆದ ವರ್ಷ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ ಬಂದಿತ್ತು.

ಬೇಂದ್ರೆ, ಮಧುರ ಚೆನ್ನ ಸೇರಿದಂತೆ ಪ್ರಖ್ಯಾತ ಸಾಹಿತಿಗಳ ಒಡನಾಡಿಯಾಗಿದ್ದ ಕಾಪಸೆ, 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ್ದರು. ಕಾಲಾಂತರದಲ್ಲಿ ಧಾರವಾಡಕ್ಕೆ ಬಂದು ನೆಲೆಸಿದ್ದ ಕಾಪಸೆ ಇಲ್ಲಿಂದ ತಮ್ಮ ಸಾಹಿತ್ಯ ಕಾಯಕ ಮುಂದುವರಿಸಿದ್ದರು.

ಇಂದು ಮಧ್ಯಾಹ್ನ 2ರವರೆಗೆ ಮೃತರ ಅಂತಿಮ ದರ್ಶನಕ್ಕೆ ದುರ್ಗಾ ಕಾಲೋನಿಯ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೃತರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು