Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ನಿ ಕೊಲೆ: ಪತಿಗೆ 10 ವರ್ಷ ಜೈಲು

ಬೆಳಗಾವಿ: ತವರು ಮನೆಯಿಂದ ಬಂಗಾರ ಹಾಗೂ ನಗದು ತರಲು ಒಪ್ಪದ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ₹20 ಸಾವಿರ ದಂಡ ಮತ್ತು 10 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಳಗಾವಿಯ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ತೀರ್ಪು ಪ್ರಕಟಿಸಿದ್ದಾರೆ. ಕುಲಗೋಡ ಠಾಣೆ ವ್ಯಾಪ್ತಿಯ ಬಿಸನಕೊಪ್ಪ ಗ್ರಾಮದ ರಮೇಶ ಬಸಪ್ಪ ಹೊಂಗಲ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ಪತ್ನಿ ಶ್ರೀದೇವಿ ರಮೇಶ ಹೊಂಗಲ ಹತ್ಯೆಯಾದವಳು. 2014 ಮೇ 19 ರಂದು ವಿವಾಹವಾಗಿದ್ದ ಇವರಿಗೆ 14 ತಿಂಗಳ ಗಂಡು ಮಗು ವಿದೆ. ಪತಿ ರಮೇಶ ಹೊಂಗಲ ಮದ್ಯ ಸೇವನೆ ಚಟ ಹೊಂದಿದ್ದ. ಇದರಿಂದ ಪತ್ನಿ ಶ್ರೀದೇವಿಗೆ ತವರು ಮನೆಯಿಂದ ಹಣ ಮತ್ತು ಬಂಗಾರವನ್ನು ವರದಕ್ಷಿಣೆ ತೆಗೆದುಕೊಂಡು ಬರುವಂತೆ ಕಿರುಕುಳ ನೀಡುತ್ತಿದ್ದ. ಈ ವಿಷಯವನ್ನು ಶ್ರೀದೇವಿ ತಮ್ಮ ಕುಟುಂಬಸ್ಥರಿಗೆ ತಿಳಿಸಿ ದ್ದರಿಂದ ತವರು ಮನೆಯವರು ಹಲವು ಬಾರಿ ಬುದ್ದಿ ವಾದ ಹೇಳಿದ್ದರು. 2021 ಜ.12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪರಾಧಿ ರಮೇಶ, ಖರ್ಚಿಗೆ ಹಣ ಇಲ್ಲ. ತವರು ಮನೆಯಿಂದ ಹಣ ಹಾಗೂ ಬಂಗಾರ ತೆಗೆದುಕೊಂಡು ಬರುವಂತೆ ಪೀಡಿಸಿದ್ದಾನೆ. ಇದಕ್ಕೆ ಪತ್ನಿ ಶ್ರೀದೇವಿ ಒಪ್ಪದ್ದರಿಂದ ಆಕ್ರೋಶಗೊಂಡು ಕೊಲೆ ಮಾಡುವ ಉದ್ದೇಶದಿಂದ ಸೀರೆಯಿಂದ ಅವಳ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಕುಲಗೋಡ ಠಾಣೆ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಷ ಪಟ್ಟಿ ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ಬೆಳಗಾವಿ ಯ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ಅವರು, ಅಪರಾಧಿಗೆ 10 ವರ್ಷ ಸಾದಾ ಜೈಲು ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ನಸರೀನ ಬಂಕಾಪೂರ ವಕಾಲತ್ತು ವಹಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು