Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾರಾಷ್ಟ್ರದಲ್ಲಿ ಪರಿಷ್ಕೃತ ಪಿಂಚಣಿ ಯೋಜನೆ ಜಾರಿ

ಮುಂಬೈ: ಮಹಾರಾಷ್ಟ್ರ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಯನ್ನು ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಶುಕ್ರವಾರ ಘೋಷಿಸಿದ್ದಾರೆ. 2005ರ ನ.1ರ ನಂತರ ಸರ್ಕಾರಿ ನೌಕರಿಗೆ ಸೇರಿದವರಿಗೆ ಇದು ಅನ್ವಯಿಸಲಿದೆ.

ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಸರ್ಕಾರದ ನಿರ್ಧಾರವನ್ನು ತಿಳಿಸಿದ ಮುಖ್ಯಮಂತ್ರಿ ಶಿಂದೆ, ‘ಪರಿಷ್ಕೃತ ಪಿಂಚಣಿ ಯೋಜನೆಯನ್ನು ಪಡೆಯಬಯಸುವ ನೌಕರರಿಗೆ ತುಟ್ಟಿ ಭತ್ಯೆ ಸಹಿತ ಅವರು ಪಡೆಯುವ ಕೊನೆಯ ವೇತನದ ಶೇ 50ರಷ್ಟು ಮೊತ್ತ ಸಿಗಲಿದೆ. ಈ ಪಿಂಚಣಿ ಮೊತ್ತದ ಶೇ 60ರಷ್ಟು ಮತ್ತು ತುಟ್ಟಿ ಭತ್ಯೆಯು ಕುಟುಂಬ ಪಿಂಚಣಿಯಾಗಿ ಸಿಗಲಿದೆ’ ಎಂದು ತಿಳಿಸಿದ್ದಾರೆ.

‘2015ರ ಏ. 1ರಿಂದ ಅನ್ವಯವಾಗುವಂತೆ ಈ ಪಿಂಚಣಿ ಯೋಜನೆ ಜಾರಿಗೆ ಬರಲಿದೆ. ರಾಜ್ಯದಲ್ಲಿರುವ ಒಟ್ಟು 13.45 ಲಕ್ಷ ನೌಕರರಲ್ಲಿ 8.27 ಲಕ್ಷ ನೌಕರರಿಗೆ ಈ ಪಿಂಚಣಿ ಯೋಜನೆ ಅನ್ವಯವಾಗಲಿದೆ’ ಎಂದಿದ್ದಾರೆ.

‘NPS ಪರಿಷ್ಕರಣೆಗೆ 2023ರ ಮಾರ್ಚ್‌ನಲ್ಲಿ ಸಮಿತಿಯೊಂದನ್ನು ಸರ್ಕಾರ ರಚಿಸಿತ್ತು. ಹಳೇ ಪಿಂಚಣಿ ಯೋಜನೆ ಮತ್ತು NPS ಅಧ್ಯಯನ ನಡೆಸಿದ ಸಮಿತಿಯು 2005ರ ನ. 1ರಿಂದ ಸರ್ಕಾರಿ ನೌಕರಿಗೆ ಸೇರಿದವರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಶಿಫಾರಸು ಮಾಡಿದೆ’ ಎಂದು ಏಕನಾಥ ಶಿಂದೆ ಸದನದಲ್ಲಿ ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?