Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದಿನಿಂದ ಮದ್ಯದ ದರ ಹೆಚ್ಚಳ

ಬೆಂಗಳೂರು :

ಮದ್ಯದ ಮೇಲಿನ ಸುಂಕ ಪರಿಷ್ಕರಣೆ ಮತ್ತೆ ತೆರಿಗೆ ಫ್ಲ್ಯಾಬ್‌ಗಳ ಬದಲಾವಣೆಗಾಗಿ ಹಣಕಾಸು ಇಲಾಖೆಯು, ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕ) (ಎರಡನೇ ತಿದ್ದುಪಡಿ) ನಿಯಮಗಳು-2025ರ ಗಜೆಟ್ ಅಧಿಸೂಚನೆ ಹೊರಡಿಸಿದೆ. ಐಎಂಎಲ್‌ನ ತೆರಿಗೆ ಫ್ಲ್ಯಾಬ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ.

ಭಾರತೀಯ ಮದ್ಯಗಳ (ಐಎಂಎಲ್)
ಮತ್ತು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಹೆಚ್ಚಿಸಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ದರವು ಗುರುವಾರದಿಂದ (ಮೇ 15) ಜಾರಿಗೆ ಬರಲಿದೆ.

ಎಇಡಿ ಹೆಚ್ಚಳದಿಂದ ಅಗ್ಗದ ದರದಲ್ಲಿ ಸಿಗುತ್ತಿದ್ದ ಬ್ರಾಂಡಿ, ವಿಸ್ಕಿ, ಜಿನ್, ರಮ್‌ನ ಬೆಲೆ ರಾಜ್ಯದಲ್ಲಿ ಇನ್ನು ಮುಂದೆ ಮತ್ತಷ್ಟು ದುಬಾರಿಯಾಗಲಿದೆ. 180 ಎಂಎಲ್‌ನ ಬಾಟಲಿ ಮತ್ತು ಸ್ಯಾಷೆಗಳ ಬೆಲೆಯಲ್ಲಿ ಗರಿಷ್ಠ ₹ 15 ಏರಿಕೆ ಆಗಲಿದೆ' ಎಂದು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಈಗ ಜಾರಿಯಲ್ಲಿರುವ ನಿಯಮಗಳ ಪ್ರಕಾರ ಐಎಂಎಲ್‌ಗಳಲ್ಲಿ ಒಟ್ಟು 18 ತೆರಿಗೆ ಸ್ಟ್ರಾಬ್‌ಗಳಿವೆ. ಈ ಫ್ಲ್ಯಾಬ್‌ಗಳನ್ನು 16ಕ್ಕೆ ಇಳಿಸಲಾಗಿದೆ. ಮೊದಲ ನಾಲ್ಕು ಫ್ಲ್ಯಾಬ್‌ಗಳನ್ನು ಗರಿಷ್ಠ ಬೆಲೆಯನ್ನು ಪರಿಷ್ಕರಿಸಲಾಗಿದೆ.

ಎಇಡಿ ಏರಿಕೆಯೊಂದಿಗೆ ಪ್ರೀಮಿಯಂ ಅಥವಾ ಇತರೆ ಬಿಯ‌ರ್ ಬ್ರಾಂಡ್‌ಗಳ ಬೆಲೆಯು ಉತ್ಪಾದನಾ ವೆಚ್ಚವನ್ನು ಅವಲಂಬಿಸಿ ಪ್ರತಿ ಬಾಟಲಿಗೆ ಸರಾಸರಿ ₹ 5ರಿಂದ ₹ 15 ಏರಿಕೆ ಆಗಲಿದೆ. ಅಗ್ಗದ ಬಿಯರ್‌ಗಳ ಬೆಲೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗಲಿದ್ದು, ₹ 25 ರವರೆಗೆ ಕಡಿಮೆ ಆಗಲಿದೆ ಎಂದು ಅಬಕಾರಿ ಇಲಾಖೆ ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ