Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

POK ಬಗ್ಗೆ ಅತ್ಯಂತ ಸ್ಪಷ್ಟವಾಗಿ ಸಂದೇಶ ರವಾನಿಸಿದ ಭಾರತ

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)

ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಕ್ಕೆ ಭಾರತ ಸ್ಪಷ್ಟಪಡಿಸಿದೆ. ಈ ಕುರಿತು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿರುದಾಗಿ ಮಾಧ್ಯಮಗಳಲ್ಲಿ ಭಾನುವಾರ ವರದಿಯಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಫ್ ಅವರು ಬಹು ಸಮಯದಿಂದಲೂ ಇರುವ ಕಾಶ್ಮೀರ ಸಮಸ್ಯೆ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ದ ಎಂದು ಹೇಳಿದ್ದರು. ಅದನ್ನು, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಸ್ವಾಗತಿಸಿದ್ದರು. ಇದೀಗ, ಈ ವಿಚಾರದಲ್ಲಿ ಭಾರತ ತನ್ನ ನಿಲುವು ಸ್ಪಷ್ಟಪಡಿಸಿದೆ.

ಶನಿವಾರ ಕದನ ವಿರಾಮ ಘೋಷಣೆಯಾದ ನಂತರ ಭಾರತ-ಪಾಕಿಸ್ತಾನ ಯುದ್ದದ ಆತಂಕ ದೂರವಾಗಿದೆ. ಆದಾಗ್ಯೂ, ಕದನ ವಿರಾಮ ಉಲ್ಲಂಘಿಸಿ ಪಾಕ್ ಪಡೆಗಳು ಗಡಿಯಲ್ಲಿ ದಾಳಿ ನಡೆಸಿರುವುದರಿಂದ ಅನಿಶ್ಚಿತ ಪರಿಸ್ಥಿತಿ ಇದೆ.

'ಕಾಶ್ಮೀರದ ವಿಚಾರದಲ್ಲಿ ಸ್ಪಷ್ಟ ನಿಲುವು ಹೊಂದಿದ್ದೇವೆ. ಪಿಒಕೆ ಹಿಂಪಡೆಯುವ ವಿಚಾರವಷ್ಟೇ ಬಾಕಿ ಇರುವುದು. ಅದನ್ನು ಬಿಟ್ಟರೆ ಮಾತನಾಡುವುಂತಹದ್ದೇನೂ ಇಲ್ಲ. ಉಗ್ರರ ಹಸ್ತಾಂತರದ ಬಗ್ಗೆ ಅವರು ಪ್ರಸ್ತಾಪಿಸಿದರೆ, ನಾವೂ ಮಾತನಾಡುತ್ತೇವೆ. ಆದರೆ, ಬೇರೆ ವಿಚಾರಗಳ ಬಗ್ಗೆ ಮಾತನಾಡುವ ಉದ್ದೇಶವಿಲ್ಲ' ಎಂದು ವಿದ್ಯಮಾನಗಳ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ.

ಹಾಗೆಯೇ, 'ನಾವು ಯಾರ ಮಧ್ಯಸ್ಥಿಕೆಯನ್ನೂ ಬಯಸುವುದಿಲ್ಲ. ಅದರ ಅಗತ್ಯವೂ ಇಲ್ಲ' ಎಂದು ಅಮೆರಿಕಕ್ಕೆ ಸ್ಪಷ್ಟವಾಗಿ ಹೇಳಿದೆ ಎನ್ನಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು