Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಲ್ಲ ಮಾದರಿಯ ಕ್ರಿಕೆಟ್‌ಗೆ ಭಾರತದ ಖ್ಯಾತನಾಮ ಆಟಗಾರ ವಿದಾಯ

ನವದೆಹಲಿ: ಟೆಸ್ಟ್ ಪರಿಣತ ಬ್ಯಾಟರ್ ಚೇತೇಶ್ವರ ಪೂಜಾರ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು (ಭಾನುವಾರ) ನಿವೃತ್ತಿ ಘೋಷಿಸಿದ್ದಾರೆ.

ಭಾರತೀಯ ಕ್ರಿಕೆಟಿಗ, ಟೆಸ್ಟ್‌ ಕ್ರಿಕೆಟ್‌ ಸ್ಪೆಷಲಿಸ್ಟ್‌, ತನ್ನ ಮೃದು ಮಾತಿನಿಂದಲೇ ಗುರುತಿಸಲ್ಪಡುತ್ತಿದ್ದ ಚೇತೇಶ್ವರ ಪೂಜಾರ ಅವರು
ಟೆಸ್ಟ್ ಕ್ರಿಕೆಟ್‌ನಲ್ಲಿನ ತಮ್ಮ ಸಾಧನೆಗೆ ಹೆಸರುವಾಸಿ. ಭಾರತದ ಅನುಭವಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಅವರು ಎಲ್ಲಾ ಮಾದರಿ ಆಟದಿಂದ ನಿವೃತ್ತಿಯಾಗುವ ಬಗ್ಗೆ ಅವರು ಭಾನುವಾರ (ಆಗಸ್ಟ್ 24) ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದರು.

ಪೂಜಾರ ಟೆಸ್ಟ್ ಮತ್ತು ಏಕದಿನ ಪಂದ್ಯಗಳೆರಡರಲ್ಲೂ ಭಾರತ ಪರ ಆಡಿದ್ದಾರೆ. ಟೆಸ್ಟ್‌ ನಲ್ಲಿ ಅವರು ಆ 103 ಬಾರಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಐದು ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಅವರು ಟೆಸ್ಟ್ ಪಂದ್ಯಗಳಿಂದಲೇ ಹೆಸರು ಪಡೆದವರು.

ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 7195 ರನ್‌ಗಳು ಮತ್ತು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 21301 ರನ್‌ಗಳನ್ನು ಗಳಿಸಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ.

ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ನನ್ನ ಕೈಲಾದಷ್ಟು ಪ್ರಯತ್ನಿಸುವುದು - ಅದರ ನಿಜವಾದ ಅರ್ಥವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು!'' ಎಂದು ಅವರು ತಮ್ಮ ಪೋಸ್ಟ್‌ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

2019-20 ಮತ್ತು 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ದಾಖಲಿಸಿದ ಸತತ ಸರಣಿ ಗೆಲುವುಗಳಲ್ಲಿ ಪೂಜಾರ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಭಾರತ ಪರ ಪೂಜಾರ ಅವರ ಕೊನೆಯ ಟೆಸ್ಟ್ ಪಂದ್ಯ ಆಡಿದ್ದು 2023 ರಲ್ಲಿ ನಡೆಯಿತು. ಅವರು ಡಬ್ಲ್ಯೂಟಿಸಿ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ತಂಡದ ಭಾಗವಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ