Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

KYC : ಗ್ಯಾಸ್ ಗ್ರಾಹಕರಿಗೆ ಮಾಹಿತಿ

 

ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ.

ಬೆಳಗ್ಗೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಜನರ ದಂಡೇ ನೆರೆದಿದೆ. ಎಲ್ಲರೂ ಆಧಾರ್ ಕಾರ್ಡ್‌ಗಳೊಂದಿಗೆ ಧಾವಿಸುತ್ತಾರೆ. ಕೆವೈಸಿ ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ನಿಲ್ಲಿಸಲಾಗುತ್ತದೆ. ಜೊತೆಗೆ ಈ ಸಂಪರ್ಕವನ್ನು ವಾಣಿಜ್ಯ ಸಂಪರ್ಕ ಎಂದು ಪರಿಗಣಿಸಲಾಗುತ್ತದೆ ಎಂಬ ಸುದ್ದಿ ಹರಡಿತ್ತು. ಕಳೆದ ವಾರವೂ ಇದೇ ರೀತಿಯ ಸುದ್ದಿ ಹರಡಿ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ನೆರೆದಿದ್ದರು.

ಈ ವಾರವೂ ಏಜೆನ್ಸಿಗಳ ಎದುರು ಜಮಾಯಿಸಿದ್ದಾರೆ. ಇದನ್ನು ನಿರೀಕ್ಷಿಸದೇ ಇದ್ದ ಕೆಲವು ಗ್ಯಾಸ್ ಏಜೆನ್ಸಿಗಳು ಕಂಗಾಲಾಗಿದ್ದವು. ಈ ಸಂಬಂಧ ಪೂರಕ ಸಿದ್ಧತೆ ಮಾಡಿಕೊಳ್ಳದೇ ಇದ್ದುದರಿಂದ ಪರದಾಡುವಂತಾಯಿತು.

ಈ ಸಂಬಂಧ ಮಾಹಿತಿ ನೀಡಿ, ಕೆವೈಸಿ ಮಾಡಿಸದಿದ್ದರೆ ಸಂಪರ್ಕ ರದ್ದಾಗುತ್ತದೆ ಎಂದಾಗಲಿ, ವಾಣಿಜ್ಯ ಸಂಪರ್ಕಕ್ಕೆ ಸಂಪರ್ಕ ಬದಲಾಗುತ್ತದೆ ಎಂಬುದೆಲ್ಲ ಸುಳ್ಳು ಸುದ್ದಿ. ಈ ರೀತಿಯ ಯಾವ ಆದೇಶವೂ ನಮಗೆ ಬಂದಿಲ್ಲ. ಆದರೆ ಕೆವೈಸಿ ಮಾಡಿಸುವುದು ಒಳ್ಳೆಯದು. ಇದರಿಂದ ಮುಂದಿನ ದಿನಗಳ ದಾಖಲಾತಿ ಸಂಗ್ರಹವಾದಂತಾಗುತ್ತದೆ. ಜೊತೆಗೆ ನಕಲಿ ಸಂಪರ್ಕಗಳು, ಇದ್ದರೆ ಅವೆಲ್ಲ ಸಹಜವಾಗಿಯೇ ರದ್ದಾಗುವಂತಾಗುತ್ತದೆ ಎಂದ ಅವರು, ಆಗಮಿಸಿದ್ದ ಎಲ್ಲರಿಗೂ ಕೆವೈಸಿ ಮಾಡಿಕೊಡಲಾಗುತ್ತಿದೆ.

ಕೊನೆಗೂ ಸ್ಪಷ್ಟನೆ :
ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಆಧಾರ್ ದೃಢೀಕರಣ ಕಡ್ಡಾಯ. ಉಳಿದ ಬಳಕೆದಾರರಿಗೆ ಗ್ಯಾಸ್ ಸಬ್ಸಿಡಿಯ ಬಗ್ಗೆ ಪ್ರಸ್ತುತ ಯಾವುದೇ ಘೋಷಣೆ ಆಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಂದ ಗ್ಯಾಸ್ ಬಳಕೆದಾರರು ಗೊಂದಲಕ್ಕೊಳಗಾಗಬಾರದು ಎಂದು ಆಹಾರ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು